
ಕರ್ಣಾವತಿ (ಗುಜರಾತ್) – ಇಲ್ಲಿನ ಜಮಾಲ್ಪುರ ಭಾಗದ ಗಾಯಕ್ವಾಡ್ ಹವೇಲಿ ಪ್ರದೇಶದಲ್ಲಿ ೨೩ ವರ್ಷದ ನೋಮಾನ್ ಶೇಖ್ ಎಂಬಾತ ೭ ವರ್ಷದ ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಮಾಜ್ ಕಲಿಸುವ ನೆಪದಲ್ಲಿ ಬಾಲಕನನ್ನು ಮಸೀದಿಯ ಮೇಲ್ಛಾವಣಿಗೆ ಕರೆದೊಯ್ದ ನೋಮಾನ್ ಅಲ್ಲಿ ಆತನ ಮೇಲೆ ದೌರ್ಜನ್ಯ ಎಸಗಿದ್ದಾನೆ. ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನೋಮಾನ್ನನ್ನು ಬಂಧಿಸಿದ್ದಾರೆ. ಈತ ಸಂತ್ರಸ್ತ ಬಾಲಕನ ನೆರೆಮನೆಯವನೇ ಆಗಿದ್ದಾನೆ.
ನೋಮಾನ್ ನಡೆಸಿದ ದೌರ್ಜನ್ಯದ ನಂತರ ಬಾಲಕನು ಮನೆಗೆ ಮರಳಿ ತನಗೆ ನಡೆದ ಅನ್ಯಾಯದ ಬಗ್ಗೆ ತಿಳಿಸಿದ್ದಾನೆ. ಬಾಲಕನ ಆರೋಗ್ಯ ಸ್ಥಿತಿ ಹದಗೆಟ್ಟಿರುವುದನ್ನು ಕಂಡ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ನೋಮಾನ್ ಬಾಲಕನನ್ನು ಮಸೀದಿಯ ಮೇಲ್ಛಾವಣಿಗೆ ಕರೆದೊಯ್ಯುತ್ತಿರುವುದು ಕಂಡುಬಂದಿದೆ. ಇದರ ಆಧಾರದ ಮೇಲೆ ಪೊಲೀಸರು ನೋಮಾನ್ನನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವು
|
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ