ಫರೀದಾಬಾದ್ (ಹರಿಯಾಣ) ಜಿಲ್ಲೆಯ ನೀಮ್ಕಾ ಕಾರಾಗೃಹದಲ್ಲಿನ ಘಟನೆ

ಫರೀದಾಬಾದ್ (ಹರಿಯಾಣ) – ಇಲ್ಲಿನ ನೀಮ್ಕಾ ಕಾರಾಗೃಹದಲ್ಲಿ ಬಂಧಿಯಾಗಿದ್ದ ಭಯೋತ್ಪಾದಕ ಅಬ್ದುಲ್ ರೆಹಮಾನ್ನನ್ನು ಫೆಬ್ರವರಿ ೮ ರಂದು ಹತ್ಯೆ ಮಾಡಲಾಗಿದೆ. ಇದೇ ಕಾರಾಗೃಹದಲ್ಲಿದ್ದ ಅರುಣ್ ಚೌಧರಿ ಎಂಬ ಕೈದಿಯು ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರ ಮಾಹಿತಿಯ ಪ್ರಕಾರ, ರೆಹಮಾನ್ನ ತಲೆಗೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಲಾಗಿದೆ. ಕೊಲೆಯ ಹಿಂದಿನ ನಿಖರವಾದ ಕಾರಣ ಇದುವರೆಗೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಹತ್ಯೆಯು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ್ದೇ ಅಥವಾ ವೈಯಕ್ತಿಕ ದ್ವೇಷದಿಂದ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಅಬ್ದುಲ್ ರೆಹಮಾನ್ನನ್ನು ಮಾರ್ಚ್ ೨೦೨೫ ರಲ್ಲಿ ಹರಿಯಾಣದ ಪಲ್ವಲ್ನಿಂದ ಬಂಧಿಸಲಾಗಿತ್ತು. ಆತನಿಂದ ೨ ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈತ ಮೂಲತಃ ಉತ್ತರ ಪ್ರದೇಶದ ಅಯೋಧ್ಯೆಯ ನಿವಾಸಿಯಾಗಿದ್ದನು, ಅವನು ‘ಇಸ್ಲಾಮಿಕ್ ಸ್ಟೇಟ್ ಖೊರಾಸನ್’ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದನು. ಅಬ್ದುಲ್ ರೆಹಮಾನ್ ಮತ್ತು ಆತನ ಸಹಚರ ಸುಫಿಯಾನ್ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅಯೋಧ್ಯೆಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಂಚು ರೂಪಿಸಿದ್ದು ಬೆಳಕಿಗೆ ಬಂದಿತ್ತು ಆರೋಪಿ ಅರುಣ್ ಚೌಧರಿಯನ್ನೂ ಸಹ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ