ಮಹಾಶಿವರಾತ್ರಿಯಂದೇ ನಡೆದ ಖೇದಕರ ಘಟನೆ

ಹಾನಿಗೊಳಗಾದ ಶಿವಲಿಂಗ ಮತ್ತು ನಂದಿ ವಿಗ್ರಹ
(ಈ ಚಿತ್ರವನ್ನು ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಪ್ರಕಟಿಸಿಲ್ಲ, ಬದಲಾಗಿ ನಡೆದಿರುವ ಅಪಚಾರದ ಬಗ್ಗೆ ತಿಳಿಸಲು ಪ್ರಕಟಿಸಲಾಗಿದೆ. – ಸಂಪಾದಕರು)
ಮಂಗಳೂರು – ದೇಶಾದ್ಯಂತ ಮಹಾಶಿವರಾತ್ರಿಯ ಸಂಭ್ರಮ ಮನೆ ಮಾಡಿರುವಾಗಲೇ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ವಿಶೇಷವೆಂದರೆ, ಮಹಾಶಿವರಾತ್ರಿ ನಿಮಿತ್ತ ಹಿಂದಿನ ದಿನವಷ್ಟೇ ಗ್ರಾಮಸ್ಥರು ದೇವಸ್ಥಾನವನ್ನು ಸ್ವಚ್ಛಗೊಳಿಸಿ, ಸುಣ್ಣ-ಬಣ್ಣ ಹಚ್ಚಿ ಅಲಂಕಾರ ಮಾಡಿದ್ದರು. ಬೆಳಿಗ್ಗೆ ಭಕ್ತರು ಪೂಜೆಗಾಗಿ ದೇವಸ್ಥಾನಕ್ಕೆ ಬಂದಾಗ, ವಿಗ್ರಹಗಳ ವಿರೂಪವಾಗಿರುವುದನ್ನು ನೋಡಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಕೃತ್ಯದಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ದೋಷಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಅಜ್ಞಾತ ವ್ಯಕ್ತಿಗಳು ರಾತ್ರಿಯ ಕತ್ತಲಲ್ಲಿ ದೇವಸ್ಥಾನಕ್ಕೆ ನುಗ್ಗಿ ಶ್ರೀ ರಾಮಲಿಂಗೇಶ್ವರ ಶಿವಲಿಂಗ ಮತ್ತು ನಂದಿ ವಿಗ್ರಹವನ್ನು ಒಡೆದಿದ್ದಾರೆ. ಅಲ್ಲದೆ, ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ಹೊನ್ನಮ್ಮದೇವಿಯ ವಿಗ್ರಹಕ್ಕೂ ಹಾನಿ ಮಾಡಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ಧಕ್ಕೆ ತರಲು ಮಹಾಶಿವರಾತ್ರಿಯಂದೇ ಇಂತಹ ಕೃತ್ಯ ಎಸಗಲಾಗಿದೆ. ಹಿಂದೂಗಳ ದೇಶದಲ್ಲೇ ಇಂತಹ ಘಟನೆ ನಡೆಯಲು ಧೈರ್ಯ ಮಾಡಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! |
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !