ತಮಿಳುನಾಡು: ಡಿಎಂಕೆ ನಾಯಕ ಜೆ. ಶಿವಾಜಿ ಕೃಷ್ಣಮೂರ್ತಿ ಗೆ ಎರಡು ವರ್ಷಗಳ ಕಾರಾಗೃಹ ಶಿಕ್ಷೆ

ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಮತ್ತು ಅಶ್ಲೀಲ ಹೇಳಿಕೆ ನೀಡಿದ ಪ್ರಕರಣ

​(ಡಿಎಂಕೆ ಎಂದರೆ ದ್ರವಿಡ ಮುನ್ನೇತ್ರ ಕಳಗಂ – ದ್ರವಿಡ ಪ್ರಗತಿ ಸಂಘ)

ಚೆನ್ನೈ (ತಮಿಳುನಾಡು) – ಇಲ್ಲಿನ ಮಹಾನಗರ ದಂಡಾಧಿಕಾರಿ ನ್ಯಾಯಾಲಯವು ೬೫ ವರ್ಷದ ಡಿಎಂಕೆ ನಾಯಕ ಜೆ. ಶಿವಾಜಿ ಕೃಷ್ಣಮೂರ್ತಿ ಅವರಿಗೆ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ೨೦ ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿದೆ. ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಮತ್ತು ಅಶೋಭನೀಯ ಹೇಳಿಕೆ ನೀಡಿದ ಪ್ರಕರಣದಲ್ಲಿ ಅವರಿಗೆ ಈ ಶಿಕ್ಷೆಯನ್ನು ವಿಧಿಸಲಾಗಿದೆ.

೧೬ ಜೂನ್ ೨೦೨೩ ರಂದು ಎರುಕ್ಕಂಚೇರಿ ಎಂಬಲ್ಲಿನ ಕೃಷ್ಣಮೂರ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಈ ಪ್ರಕರಣ ವರದಿಯಾಗಿತ್ತು. ಆಗ ನಡೆದ ಕಾರ್ಯಕ್ರಮದಲ್ಲಿ ಶಿವಾಜಿ ಅವರು ತಮ್ಮ ಭಾಷಣದಲ್ಲಿ ರಾಜ್ಯಪಾಲರು, ನಟಿ ಮತ್ತು ನಂತರ ನಾಯಕಿಯಾದ ಖುಷ್ಬೂ ಸುಂದರ್, ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ, ಬಿಜೆಪಿಯ ಮಾಜಿ ಪ್ರದೇಶಾಧ್ಯಕ್ಷ ಕೆ. ಅಣ್ಣಾಮಲೈ ಮತ್ತು ಮಾಜಿ ಸಚಿವ ಡಿ. ಜಯಕುಮಾರ್ ಅವರ ಹೆಸರನ್ನು ಉಲ್ಲೇಖಿಸಿ ಅವಮಾನಕರ ಮತ್ತು ಅಶ್ಲೀಲ ಭಾಷೆಯನ್ನು ಬಳಸಿದ್ದರು. ಈ ಭಾಷಣದ ನಂತರ ವಿವಾದ ಉಂಟಾಯಿತು ಮತ್ತು ಪೊಲೀಸರು ಕ್ರಮ ಕೈಗೊಂಡರು. ಪೊಲೀಸರು ಶಿವಾಜಿ ಅವರನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.