ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಮತ್ತು ಅಶ್ಲೀಲ ಹೇಳಿಕೆ ನೀಡಿದ ಪ್ರಕರಣ

(ಡಿಎಂಕೆ ಎಂದರೆ ದ್ರವಿಡ ಮುನ್ನೇತ್ರ ಕಳಗಂ – ದ್ರವಿಡ ಪ್ರಗತಿ ಸಂಘ)
ಚೆನ್ನೈ (ತಮಿಳುನಾಡು) – ಇಲ್ಲಿನ ಮಹಾನಗರ ದಂಡಾಧಿಕಾರಿ ನ್ಯಾಯಾಲಯವು ೬೫ ವರ್ಷದ ಡಿಎಂಕೆ ನಾಯಕ ಜೆ. ಶಿವಾಜಿ ಕೃಷ್ಣಮೂರ್ತಿ ಅವರಿಗೆ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ೨೦ ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿದೆ. ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಮತ್ತು ಅಶೋಭನೀಯ ಹೇಳಿಕೆ ನೀಡಿದ ಪ್ರಕರಣದಲ್ಲಿ ಅವರಿಗೆ ಈ ಶಿಕ್ಷೆಯನ್ನು ವಿಧಿಸಲಾಗಿದೆ.
೧೬ ಜೂನ್ ೨೦೨೩ ರಂದು ಎರುಕ್ಕಂಚೇರಿ ಎಂಬಲ್ಲಿನ ಕೃಷ್ಣಮೂರ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಈ ಪ್ರಕರಣ ವರದಿಯಾಗಿತ್ತು. ಆಗ ನಡೆದ ಕಾರ್ಯಕ್ರಮದಲ್ಲಿ ಶಿವಾಜಿ ಅವರು ತಮ್ಮ ಭಾಷಣದಲ್ಲಿ ರಾಜ್ಯಪಾಲರು, ನಟಿ ಮತ್ತು ನಂತರ ನಾಯಕಿಯಾದ ಖುಷ್ಬೂ ಸುಂದರ್, ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ, ಬಿಜೆಪಿಯ ಮಾಜಿ ಪ್ರದೇಶಾಧ್ಯಕ್ಷ ಕೆ. ಅಣ್ಣಾಮಲೈ ಮತ್ತು ಮಾಜಿ ಸಚಿವ ಡಿ. ಜಯಕುಮಾರ್ ಅವರ ಹೆಸರನ್ನು ಉಲ್ಲೇಖಿಸಿ ಅವಮಾನಕರ ಮತ್ತು ಅಶ್ಲೀಲ ಭಾಷೆಯನ್ನು ಬಳಸಿದ್ದರು. ಈ ಭಾಷಣದ ನಂತರ ವಿವಾದ ಉಂಟಾಯಿತು ಮತ್ತು ಪೊಲೀಸರು ಕ್ರಮ ಕೈಗೊಂಡರು. ಪೊಲೀಸರು ಶಿವಾಜಿ ಅವರನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ