ಬಂಗಾಳದಲ್ಲಿ ‘ಎಸ್.ಐ.ಆರ್.’ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಪ್ರಕರಣ

ಕೋಲಕಾತಾ (ಬಂಗಾಳ) – ರಾಜ್ಯದಲ್ಲಿ ‘ಎಸ್.ಐ.ಆರ್.’ (‘ಎಸ್.ಐ.ಆರ್.’ ಎಂದರೆ ‘ಸ್ಪೆಷಲ್ ಇಂಟೆನ್ಸಿವ್ ರಿವಿಷನ್’ ಅಂದರೆ ಮತದಾರರ ವಿಶೇಷ ಆಳವಾದ ಪುನರ್ವಿಮರ್ಶೆ) ಪ್ರಕ್ರಿಯೆಯ ಅವಧಿಯಲ್ಲಿ ನಿರ್ಲಕ್ಷ್ಯ ಮತ್ತು ಸಾಂವಿಧಾನಿಕ ಅಧಿಕಾರಗಳ ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮುರ್ಷಿದ್ ಆಲಂ, ಸೆಫಾವುರ್ ರೆಹಮಾನ್ ಸೇರಿದಂತೆ ಬಂಗಾಳದ 7 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಡಾ. ಸೆಫಾವುರ್ ರೆಹಮಾನ್ ಅವರು ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದು, ಅವರಿಗೆ ಮುರ್ಷಿದಾಬಾದ್ ಜಿಲ್ಲೆಯ ಸಂಸೇರಗಂಜ್ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಮುರ್ಷಿದ್ ಆಲಂ ಅವರು ಸಹಾಯಕ ಕೃಷಿ ನಿರ್ದೇಶಕರಾಗಿದ್ದು, ಅವರಿಗೆ 57 ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿಯಿತ್ತು. ನಿತೀಶ್ ದಾಸ್ ಅವರು ಫರಕ್ಕಾ ಪ್ರದೇಶದ ಕಂದಾಯ ಅಧಿಕಾರಿಯಾಗಿದ್ದು, ಅವರಿಗೆ ಫರಕ್ಕಾ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಡಾಲಿಯಾ ರೇ ಚೌಧರಿ ಅವರು ಮಹಿಳಾ ಅಭಿವೃದ್ಧಿ ಅಧಿಕಾರಿಯಾಗಿದ್ದು, ಅವರಿಗೆ ಮಯನಾಗುಡಿ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಸತ್ಯಜಿತ್ ದಾಸ್ ಅವರು ಜಂಟಿ ತಾಲ್ಲೂಕು ಅಭಿವೃದ್ಧಿ ಅಧಿಕಾರಿಯಾಗಿದ್ದು, ಅವರಿಗೆ ‘139 ಕ್ಯಾನಿಂಗ್ ಪೂರ್ವ’ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಜಾಯ್ದೀಪ್ ಕುಂಡು ಅವರಿಗೆ ‘139 ಕ್ಯಾನಿಂಗ್ ಪೂರ್ವ’ ವಿಧಾನಸಭಾ ಕ್ಷೇತ್ರದ ಮತದಾರರ ಆಳವಾದ ಪುನರ್ವಿಮರ್ಶೆಯ ಜವಾಬ್ದಾರಿಯಿತ್ತು. ದೇಬಾಶಿಷ್ ವಿಶ್ವಾಸ್ ಅವರು ಜಂಟಿ ತಾಲ್ಲೂಕು ಅಭಿವೃದ್ಧಿ ಅಧಿಕಾರಿಯಾಗಿದ್ದು, ಅವರಿಗೆ 229 ದೇಬ್ರಾ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು.
ಆಯೋಗವು ಈ ಅಧಿಕಾರಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ. ‘ಎಸ್.ಐ.ಆರ್.’ ಇದು ಸೂಕ್ಷ್ಮ ವಿಷಯವಾಗಿದ್ದು, ಅದರಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಆಯೋಗವು ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ