ಬಂಗಾಳದಲ್ಲಿ ‘ಎಸ್.ಐ.ಆರ್.’ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಪ್ರಕರಣ

ಕೋಲಕಾತಾ (ಬಂಗಾಳ) – ರಾಜ್ಯದಲ್ಲಿ ‘ಎಸ್.ಐ.ಆರ್.’ (‘ಎಸ್.ಐ.ಆರ್.’ ಎಂದರೆ ‘ಸ್ಪೆಷಲ್ ಇಂಟೆನ್ಸಿವ್ ರಿವಿಷನ್’ ಅಂದರೆ ಮತದಾರರ ವಿಶೇಷ ಆಳವಾದ ಪುನರ್ವಿಮರ್ಶೆ) ಪ್ರಕ್ರಿಯೆಯ ಅವಧಿಯಲ್ಲಿ ನಿರ್ಲಕ್ಷ್ಯ ಮತ್ತು ಸಾಂವಿಧಾನಿಕ ಅಧಿಕಾರಗಳ ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮುರ್ಷಿದ್ ಆಲಂ, ಸೆಫಾವುರ್ ರೆಹಮಾನ್ ಸೇರಿದಂತೆ ಬಂಗಾಳದ 7 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಡಾ. ಸೆಫಾವುರ್ ರೆಹಮಾನ್ ಅವರು ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದು, ಅವರಿಗೆ ಮುರ್ಷಿದಾಬಾದ್ ಜಿಲ್ಲೆಯ ಸಂಸೇರಗಂಜ್ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಮುರ್ಷಿದ್ ಆಲಂ ಅವರು ಸಹಾಯಕ ಕೃಷಿ ನಿರ್ದೇಶಕರಾಗಿದ್ದು, ಅವರಿಗೆ 57 ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿಯಿತ್ತು. ನಿತೀಶ್ ದಾಸ್ ಅವರು ಫರಕ್ಕಾ ಪ್ರದೇಶದ ಕಂದಾಯ ಅಧಿಕಾರಿಯಾಗಿದ್ದು, ಅವರಿಗೆ ಫರಕ್ಕಾ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಡಾಲಿಯಾ ರೇ ಚೌಧರಿ ಅವರು ಮಹಿಳಾ ಅಭಿವೃದ್ಧಿ ಅಧಿಕಾರಿಯಾಗಿದ್ದು, ಅವರಿಗೆ ಮಯನಾಗುಡಿ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಸತ್ಯಜಿತ್ ದಾಸ್ ಅವರು ಜಂಟಿ ತಾಲ್ಲೂಕು ಅಭಿವೃದ್ಧಿ ಅಧಿಕಾರಿಯಾಗಿದ್ದು, ಅವರಿಗೆ ‘139 ಕ್ಯಾನಿಂಗ್ ಪೂರ್ವ’ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು. ಜಾಯ್ದೀಪ್ ಕುಂಡು ಅವರಿಗೆ ‘139 ಕ್ಯಾನಿಂಗ್ ಪೂರ್ವ’ ವಿಧಾನಸಭಾ ಕ್ಷೇತ್ರದ ಮತದಾರರ ಆಳವಾದ ಪುನರ್ವಿಮರ್ಶೆಯ ಜವಾಬ್ದಾರಿಯಿತ್ತು. ದೇಬಾಶಿಷ್ ವಿಶ್ವಾಸ್ ಅವರು ಜಂಟಿ ತಾಲ್ಲೂಕು ಅಭಿವೃದ್ಧಿ ಅಧಿಕಾರಿಯಾಗಿದ್ದು, ಅವರಿಗೆ 229 ದೇಬ್ರಾ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯಿತ್ತು.
ಆಯೋಗವು ಈ ಅಧಿಕಾರಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ. ‘ಎಸ್.ಐ.ಆರ್.’ ಇದು ಸೂಕ್ಷ್ಮ ವಿಷಯವಾಗಿದ್ದು, ಅದರಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಆಯೋಗವು ತಿಳಿಸಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ