
ಮಥುರಾ (ಉತ್ತರ ಪ್ರದೇಶ) – ಇಲ್ಲಿನ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪಶು ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಆವರಣದಲ್ಲಿ ದೇಶದ ಮೊದಲ ‘ರಾಷ್ಟ್ರೀಯ ಗೋ ಸಂಸ್ಕೃತಿ ಸಂಗ್ರಹಾಲಯ’ವನ್ನು ಸ್ಥಾಪಿಸಲಾಗುವುದು. ಉತ್ತರ ಪ್ರದೇಶ ಬ್ರಜ್ ತೀರ್ಥ ವಿಕಾಸ ಪರಿಷತ್ತಿನ ನೇತೃತ್ವದಲ್ಲಿ ಈ ಸಂಗ್ರಹಾಲಯ ನಿರ್ಮಿಸಲಾಗುತ್ತಿದೆ.
೧. ಪ್ರಸ್ತಾವಿತ ಸಂಗ್ರಹಾಲಯದ ಮುಖ್ಯ ಉದ್ದೇಶವು ಹಸುಗಳ ಪ್ರಯೋಜನಗಳು ಮತ್ತು ಅವುಗಳ ಉತ್ಪನ್ನಗಳ ಬಗ್ಗೆ ಜನಜಾಗೃತಿ ಮೂಡಿಸುವುದಾಗಿದೆ. ಈ ಸಂಗ್ರಹಾಲಯದ ಮೂಲಕ ಹಸುವಿನ ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವದ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಸಂಗ್ರಹಾಲಯವು ಪರಂಪರೆ ಮತ್ತು ವಿಜ್ಞಾನದ ಮಿಶ್ರಣವಾಗಿರಲಿದೆ ಎಂದು ಪರಿಷತ್ತಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
೨. ರಾಷ್ಟ್ರೀಯ ಗೋ ಸಂಸ್ಕೃತಿ ಸಂಗ್ರಹಾಲಯದಲ್ಲಿ ದೇಶಾದ್ಯಂತದ ಪ್ರಮುಖ ಗೋ ತಳಿಗಳು ಮತ್ತು ಅಳಿವಿನಂಚಿನಲ್ಲಿರುವ ತಳಿಗಳ ಸುಮಾರು ೧೦೦ ಡಿಜಿಟಲ್ ಮತ್ತು ಸಾಂಕೇತಿಕ ಮಾದರಿಗಳನ್ನು ಇಡಲಾಗುವುದು. ಇದಲ್ಲದೆ, ಸಂಗ್ರಹಾಲಯದಲ್ಲಿ ಹಾಲು ಮತ್ತು ಹಾಲಿನಿಂದ ತಯಾರಿಸಿದ ಮೊಸರು, ಚೀಸ್ ಮತ್ತು ತುಪ್ಪದಂತಹ ಉತ್ಪನ್ನಗಳ ಪ್ರದರ್ಶನವಿರಲಿದೆ. ಹಾಲು ಉತ್ಪಾದನೆ ಹೆಚ್ಚಿಸುವ ತಂತ್ರಜ್ಞಾನ, ವೈಜ್ಞಾನಿಕ ದೃಷ್ಟಿಕೋನ ಸೇರಿದಂತೆ ವಿವಿಧ ಪ್ರಯೋಜನಗಳನ್ನು ನಾಗರಿಕರಿಗೆ ವಿವರಿಸಲಾಗುವುದು, ಎಂದು ಬ್ರಜ್ ತೀರ್ಥ ವಿಕಾಸ ಪರಿಷತ್ತು ತಿಳಿಸಿದೆ.
ಸಂಪಾದಕೀಯ ನಿಲುವುಇದೊಂದು ಉತ್ತಮ ಪ್ರಯತ್ನ; ಆದರೆ ಇದರ ಜೊತೆಗೆ ದೇಸಿ ತಳಿಯ ಹಸುಗಳ ಸಂರಕ್ಷಣೆಗಾಗಿ ಮತ್ತು ಅವುಗಳ ಹತ್ಯೆಯಾಗದಂತೆ ತಡೆಯಲು ಪ್ರಯತ್ನಗಳನ್ನು ಹೆಚ್ಚಿಸುವ ಅವಶ್ಯಕತೆಯಿದೆ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ