ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಮಕ್ಕಳ ಲೈಂಗಿಕ ಶೋಷಣೆ ಪ್ರಕರಣ ದಾಖಲಿಸಲು ಆದೇಶ

ಪ್ರಯಾಗರಾಜ್ (ಉತ್ತರ ಪ್ರದೇಶ) – ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ವಿರುದ್ಧ ಅಪ್ರಾಪ್ತ ಮಕ್ಕಳ ಲೈಂಗಿಕ ಶೋಷಣೆಯ ಆರೋಪದಡಿ ಪ್ರಕರಣ ದಾಖಲಿಸುವಂತೆ ಇಲ್ಲಿನ ಪೋಕ್ಸೋ (POCSO) ನ್ಯಾಯಾಲಯವು ಆದೇಶಿಸಿದೆ. ಜಗದ್ಗುರು ರಾಮಭದ್ರಾಚಾರ್ಯ ಅವರ ಶಿಷ್ಯ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಇಬ್ಬರು ಮಕ್ಕಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಆರೋಪಗಳನ್ನು ಮಾಡಿದ್ದರು.