ನವದೆಹಲಿ: ಕೆಂಪು ಕೋಟೆ, ಚಾಂದನೀ ಚೌಕ್ ನಲ್ಲಿನ ದೇವಾಲಯದ ಮೇಲೆ ದಾಳಿಗೆ ಉಗ್ರರ ಸಂಚು Delhi Terror Plot Foiled

ಪಾಕಿಸ್ತಾನದ ರಾಜಧಾನಿಯಲ್ಲಿನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಪ್ರಯತ್ನ


​ನವದೆಹಲಿ: ಕೆಂಪು ಕೋಟೆಯ ಸುತ್ತ-ಮುತ್ತಲಿನ ಪ್ರದೇಶ ಮತ್ತು ಚಾಂದನೀ ಚೌಕ್‌ನಲ್ಲಿರುವ ದೇವಾಲಯದ ಮೇಲೆ ಭಯೋತ್ಪಾದಕ ದಾಳಿ ನಡೆಸಲು ‘ಲಷ್ಕರ್-ಎ-ತೊಯ್ಬಾ’ ಸಂಘಟನೆಯು ಸಂಚು ರೂಪಿಸಿದೆ ಎಂಬ ಗುಪ್ತಚರ ಮಾಹಿತಿ ಸಿಕ್ಕ ನಂತರ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯೊಂದರಲ್ಲಿ ನಡೆದ ಸ್ಫೋಟಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ದೆಹಲಿಯಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

​ಕಳೆದ ವರ್ಷ ನವೆಂಬರ್ ೧೦ ರಂದು ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ೧೦ ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಅನೇಕರು ಗಾಯಗೊಂಡಿದ್ದರು.