ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : ಫೆಬ್ರವರಿ ೧೯ ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ಮೇಲೆ ನಗರದ ಮಸೀದಿಯೊಂದರಿಂದ ಕಲ್ಲು ತೂರಾಟ ಮಾಡಲಾಗಿದೆ. ಈ ಘಟನೆಯನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಜನತೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಅವರು ‘ಎಕ್ಸ್’ ಮೂಲಕ ಮನವಿ ಮಾಡಿದರು. ‘ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಇದರಲ್ಲಿ ಭಾಗಿಯಾಗಿರುವ ಸಮಾಜಘಾತುಕ ಶಕ್ತಿಗಳಿಗೆ ಕಾನೂನಿನ ಪ್ರಕಾರ ತಕ್ಕ ಪ್ರತ್ಯುತ್ತರ ನೀಡುವಂತೆ ನಾನು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ನಡೆದ ಈ ಕಲ್ಲು ತೂರಾಟದ ಘಟನೆಗೆ ಹಿಂದೂ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿವೆ. (ಹಿಂದೂಗಳು ಸಂಘಟಿತ ಶಕ್ತಿಯನ್ನು ಪ್ರದರ್ಶಿಸಿದರೆ, ಧರ್ಮಾಂಧರು ಈ ರೀತಿ ದಾಳಿ ಮಾಡುವ ಧೈರ್ಯ ಮಾಡುವುದಿಲ್ಲ. ಆದ್ದರಿಂದ ಹಿಂದೂ ಸಂಘಟನೆಯೇ ಇಂದಿನ ಕಾಲದ ನಿಜವಾದ ಅಗತ್ಯವಾಗಿದೆ! – ಸಂಪಾದಕರು). ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ೮ ಜನರನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿದ್ದಾರೆ.
Bagalkot Stone Pelting Row: CM @siddaramaiah assures “strict action” against anti-social elements.
With Congress in power, an administration some describe as the modern-day "descendants of the Mughals"; can Hindus truly expect justice?
Stone pelting on Shiv Jayanti procession… https://t.co/ZPPUsz4FIS pic.twitter.com/CSBMWucV3L
— Sanatan Prabhat (@SanatanPrabhat) February 21, 2026
ಸಂಪಾದಕೀಯ ನಿಲುವುಮುಖ್ಯಮಂತ್ರಿಗಳು ಹೀಗೆ ಹೇಳುತ್ತಿದ್ದರೂ, ಕರ್ನಾಟಕದಲ್ಲಿ ಕಾಂಗ್ರೆಸ್ ಅಂದರೆ ಮೊಘಲರ ವಂಶಸ್ಥರ ಆಡಳಿತ ಇರುವುದರಿಂದ, ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ದಾಳಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ತೀರಾ ಕಡಿಮೆ! ಆಕ್ರೋಶಗೊಂಡ ಹಿಂದೂಗಳನ್ನು ಶಾಂತಗೊಳಿಸಲು ಮುಖ್ಯಮಂತ್ರಿಗಳು ಇಂತಹ ಪೊಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ! |
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ