|

ತಿರುವನಂತಪುರಂ (ಕೇರಳ) – ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗುವ ಸರಕಾರಿ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳಿಗೆ ಇನ್ಮುಂದೆ ಧರ್ಮದ ಆಧಾರದ ಮೇಲೆ ಹೆಸರಿಡುವುದಿಲ್ಲ ಎಂದು ಕೇರಳ ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಬಿಡುಗಡೆ ಮಾಡಲಾದ ಅಧಿಕೃತ ಮನವಿಯಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ.
ಸರಕಾರಿ ಮೂಲಗಳ ಮಾಹಿತಿಯ ಪ್ರಕಾರ, ‘ಸರಕಾರಿ ಶೈಕ್ಷಣಿಕ ಸಂಸ್ಥೆಗಳು ಜಾತ್ಯತೀತವಾಗಿರಬೇಕು’ ಮತ್ತು ‘ಸಂವಿಧಾನದ ಸಮಾನತೆ ಹಾಗೂ ಒಳಗೊಳ್ಳುವಿಕೆಯ ಮೌಲ್ಯಗಳು ಅದರಲ್ಲಿ ಪ್ರತಿಫಲಿಸಬೇಕು’ ಎಂಬುದು ಈ ನಿರ್ಧಾರದ ಹಿಂದಿನ ಉದ್ದೇಶವಾಗಿದೆ. ಈ ನಿರ್ಧಾರವು ಕೇವಲ ಮುಂದೆ ಸ್ಥಾಪನೆಯಾಗುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ ಸರಕಾರಿ ಶಾಲೆಗಳು, ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳ ಹೆಸರುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ನ್ಯಾಯಮೂರ್ತಿ ಜೆ.ಬಿ. ಕೋಶಿ ಆಯೋಗದ ವರದಿಗೆ ಸಮ್ಮತಿ!
ರಾಜ್ಯ ಸಚಿವ ಸಂಪುಟವು ನ್ಯಾಯಮೂರ್ತಿ ಜೆ.ಬಿ. ಕೋಶಿ ಆಯೋಗದ ವರದಿಗೆ ತಾತ್ವಿಕವಾಗಿ ಸಮ್ಮತಿ ನೀಡಿದ್ದು, ಅದನ್ನು ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಿದೆ. ಕೇರಳಮ್ನ ಕ್ರೈಸ್ತ ಅಲ್ಪಸಂಖ್ಯಾತರ ಶಿಕ್ಷಣ, ಆರ್ಥಿಕ ಹಿಂದುಳಿದಿರುವಿಕೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಧ್ಯಯನ ಮಾಡಲು ಈ ಆಯೋಗವನ್ನು ನೇಮಿಸಲಾಗಿತ್ತು. (ಕೇವಲ ಕ್ರೈಸ್ತರ ಕಲ್ಯಾಣದ ಬಗ್ಗೆ ಯೋಚಿಸುವ ಕೇರಳಮ್ನ ಕಮ್ಯುನಿಸ್ಟ್ ಆಡಳಿತಗಾರರು ಇತರ ಸಮುದಾಯಗಳ ಕಲ್ಯಾಣದ ಬಗ್ಗೆ ಎಂದಾದರೂ ಯೋಚಿಸಿದ್ದಾರೆಯೇ? – ಸಂಪಾದಕರು)
ಸಂಪಾದಕೀಯ ನಿಲುವುಕ್ರೈಸ್ತರ ಕಾನ್ವೆಂಟ್ ಶಾಲೆಗಳಲ್ಲಿ ಹಿಂದೂ ಮಕ್ಕಳ ಪ್ರತ್ಯಕ್ಷ ಅಥವಾ ವೈಚಾರಿಕ ಮತಾಂತರ ಮಾಡಲಾಗುತ್ತದೆ. ಇಂತಹ ಅನೇಕ ಘಟನೆಗಳು ಎಲ್ಲೆಡೆಯಿಂದ ವರದಿಯಾಗುತ್ತಲೇ ಇವೆ. ಹೀಗಿರುವಾಗ, ಜಾತ್ಯತೀತತೆಯ ಮೇಲೆ ನಿಜವಾದ ಕಾಳಜಿ ಇದ್ದರೆ, ಇಂತಹ ಕಾನ್ವೆಂಟ್ ಶಾಲೆಗಳ ಮೇಲೆ ಕಮ್ಯುನಿಸ್ಟ್ ಸರಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ