|

ಭಟ್ಕಳ – ಭಟ್ಕಳ ತಾಲೂಕಿನ ಮುರುಡೇಶ್ವರ-ಬೈಲೂರು ಮಾರ್ಗದ ತೆಂಗಾರ ರಸ್ತೆಯಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ೭ ಅಪ್ರಾಪ್ತ ಮುಸಲ್ಮಾನರು ಹಿಂದೂಗಳ ಕೆಲವು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯು ಫೆಬ್ರವರಿ ೨೩ ರಂದು ನಡೆದಿದೆ. ಇದರಿಂದ ಮನೆಗಳ ಕಿಟಕಿಗಳು ಪುಡಿಪುಡಿಯಾಗಿವೆ. ಘಟನೆಯ ಸಮಯದಲ್ಲಿ ಸಿಕ್ಕಿಬಿದ್ದ ೨ ಹುಡುಗರನ್ನು ಸ್ಥಳೀಯ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ. ತದನಂತರ ಪೊಲೀಸರು ಉಳಿದ ೫ ಹುಡುಗರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದ ಪರಿಸರದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವಶಕ್ಕೆ ಪಡೆದ ಹುಡುಗರ ವೈದ್ಯಕೀಯ ತಪಾಸಣೆ ನಡೆಸಿದಾಗ ಅವರೆಲ್ಲರೂ ಮಾದಕ ವಸ್ತು ಸೇವಿಸಿರುವುದು ಪತ್ತೆಯಾಗಿದೆ. ಇವರೆಲ್ಲರನ್ನು ಬಾಲ ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೈಲೂರು ಮತ್ತು ಮುರುಡೇಶ್ವರ ಭಾಗಗಳಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ