
ನವ ದೆಹಲಿ – ದೆಹಲಿಯ ಅಮನ್ ವಿಹಾರ್ ಪ್ರದೇಶದಲ್ಲಿ 50 ವರ್ಷದ ಅಜಯ ಕುಮಾರ್ ಎಂಬುವವರನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೆಹಬೂಬ್ ಅಲಿ ಮತ್ತು ಸೋನು ಎಂಬ ಸಹೋದರರು ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಜಯ ಕಳೆದ 6 ದಿನಗಳಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ನಜಾಫ್ಗಢದ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ.
ವಿಚಾರಣೆಯ ವೇಳೆ, ಅಜಯ ಅವರು ಪಡೆದಿದ್ದ 4 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಕಾರಣ ಇಬ್ಬರು ಆರೋಪಿಗಳು ಅವರನ್ನು ಕೊಂದಿರುವುದು ಬೆಳಕಿಗೆ ಬಂದಿದೆ. ಹಣದ ನೆಪದಲ್ಲಿ ಅವರನ್ನು ಮನೆಗೆ ಕರೆಸಿಕೊಂಡು ಪ್ರಾಣಾಂತಿಕ ಹಲ್ಲೆ ನಡೆಸಲಾಗಿದೆ. ಆರೋಪಿಗಳು ಮಾಂಸ ಕತ್ತರಿಸಲು ಬಳಸುವ ಕತ್ತಿ ಮತ್ತು ಗರಗಸದಂತಹ ಆಯುಧಗಳಿಂದ ಅಜಯ ಕುಮಾರ್ ಅವರನ್ನು ಹತ್ಯೆ ಮಾಡಿದ್ದಾರೆ. ಅಜಯ ಕುಮಾರ್ ಅವರ ಗುರುತು ಸಿಗದಂತೆ ಮಾಡಲು ಮುಖವನ್ನು ವಿಕಾರಗೊಳಿಸಲಾಗಿದೆ ಮತ್ತು ತಲೆಗೆ ತೀವ್ರವಾಗಿ ಪೆಟ್ಟು ನೀಡಲಾಗಿದೆ. ನಂತರ ಮೃತದೇಹವನ್ನು ಚೀಲದಲ್ಲಿ ತುಂಬಿ ಕಾಲುವೆಗೆ ಎಸೆಯಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಇಬ್ಬರು ಸಹೋದರರನ್ನು ಬಂಧಿಸಿದ್ದಾರೆ. ಸಂತ್ರಸ್ತ ಕುಟುಂಬದವರು ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕ್ರೂರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ