|

ಮುಂಬಯಿ, ಫೆಬ್ರವರಿ 26 (ವಾರ್ತೆ) – ಸ್ವಾತಂತ್ರ್ಯವೀರ ಸಾವರ್ಕರ್ ಅವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರಿಗೆ ಮರಣೋತ್ತರ ‘ಭಾರತರತ್ನ’ ಪ್ರಶಸ್ತಿಯನ್ನು ನೀಡಬೇಕು. ರಾಜ್ಯ ಸರಕಾರದ ಸಂಸದೀಯ ವ್ಯವಹಾರಗಳ ಸಚಿವರು ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಬೇಕು ಮತ್ತು ಸಭಾಪತಿಗಳು ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಬೇಕು ಎಂದು ಭಾಜಪ ಶಾಸಕ ಶ್ರೀ. ಪ್ರಸಾದ ಲಾಡ್ ಅವರು ಫೆಬ್ರವರಿ 26 ರಂದು ವಿಧಾನ ಪರಿಷತ್ತಿನಲ್ಲಿ ಒತ್ತಾಯಿಸಿದರು.
ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದೀಯ ವ್ಯವಹಾರಗಳ ಸಚಿವ ಶ್ರೀ. ಚಂದ್ರಕಾಂತ ಪಾಟೀಲ್ ಅವರು, “ಸರಕಾರವು ಇಂತಹ ಪ್ರಸ್ತಾವನೆಯನ್ನು ತರಬೇಕಾಗುತ್ತದೆ. ನಾನು ಈ ಪರಿಷತ್ತಿನಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸುತ್ತೇನೆ. ಅದರ ನಂತರ ಸಭಾಪತಿಯವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ,” ಎಂದು ಹೇಳಿದರು.
ಹಿಂದೂತ್ವನಿಷ್ಠ ಸರಕಾರದಿಂದ ಜನರ ನಿರೀಕ್ಷೆ!
ಕಳೆದ 10 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಕೇಂದ್ರ ಮತ್ತು ರಾಜ್ಯದಲ್ಲಿ ಸ್ವಾತಂತ್ರ್ಯವೀರ ಸಾವರ್ಕರ್ ಅವರ ಹಿಂದೂತ್ವನಿಷ್ಠ ವಿಚಾರಧಾರೆಗಳನ್ನು ಅನುಸರಿಸುವ ಸರಕಾರವೇ ಅಧಿಕಾರದಲ್ಲಿದೆ; ಆದರೂ ಸ್ವಾತಂತ್ರ್ಯವೀರ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಇದುವರೆಗೆ ‘ಭಾರತರತ್ನ’ ಸಿಕ್ಕಿಲ್ಲ. ಈ ಬಗ್ಗೆ ಹಿಂದೂತ್ವನಿಷ್ಠ ಸಂಘಟನೆಗಳು ಬೇಸರ ವ್ಯಕ್ತಪಡಿಸುತ್ತಲೇ ಬಂದಿವೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್ ಅವರೂ ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದರು. ಈಗ ವಿಧಾನ ಪರಿಷತ್ತಿನಲ್ಲಿ ಈ ಬೇಡಿಕೆ ಕೇಳಿಬಂದಿರುವುದರಿಂದ ಸಾವರ್ಕರ್ ಪ್ರೇಮಿಗಳಲ್ಲಿ ಹೊಸ ಭರವಸೆ ಚಿಗುರೊಡೆದಿದೆ.
ಸಂಪಾದಕೀಯ ನಿಲುವುಸ್ವಾತಂತ್ರ್ಯವೀರ ಸಾವರ್ಕರ್ ಅವರು ಕೇವಲ ಪದವಿಗಾಗಿಯಲ್ಲ, ಬದಲಾಗಿ ಈ ದೇಶದ ಅಸ್ಮಿತೆಗಾಗಿ ಬದುಕಿದವರು. ಅವರಿಗೆ ‘ಭಾರತರತ್ನ’ ಲಭಿಸುವುದು ಸಾವರ್ಕರ್ ಅವರಿಗಲ್ಲ, ಬದಲಾಗಿ ಆ ಪುರಸ್ಕಾರಕ್ಕೇ ಸಿಗುವ ನಿಜವಾದ ಗೌರವವಾಗಿದೆ. ರಾಜ್ಯ ಸರಕಾರವು ಕೇವಲ ಭರವಸೆ ನೀಡದೆ, ಪ್ರತ್ಯಕ್ಷವಾಗಿ ಕ್ರಮ ಕೈಗೊಂಡು ಈ ಪ್ರಸ್ತಾವನೆಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕೆಂಬುದೇ ದೇಶಪ್ರೇಮಿ ನಾಗರಿಕರ ಆಶಯವಾಗಿದೆ! |
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ