ಕ್ರೈಸ್ತ ತಂದೆ-ಮಗನಿಂದ ಅಪ್ರಾಪ್ತ ಹಿಂದೂ ಬಾಲಕನ ಮೇಲೆ ಹಲ್ಲೆ !

  • ಹುಡುಗಿಯೊಂದಿಗೆ ಮಾತನಾಡಿದ್ದಕ್ಕೆ ಆಕ್ರೋಶ !

  • ಜಾತಿ ನಿಂದನೆ ಮಾಡಿದರು!


ಮಂಗಳೂರು – ಹುಡುಗಿಯೊಬ್ಬಳ ಜೊತೆ ಮಾತನಾಡಿದ್ದಕ್ಕಾಗಿ ಅಪ್ರಾಪ್ತ ಹಿಂದೂ ಬಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಟೀವನ್ ಮೊಂತೇರೋ ಮತ್ತು ಆತನ ಮಗ ಅವಿಲ್ ಎಂಬುವವರನ್ನು ಇತ್ತೀಚೆಗೆ ವಶಕ್ಕೆ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಗುಡ್ಡೆಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ಅಪ್ರಾಪ್ತ ಹಿಂದೂ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂತ್ರಸ್ತ ಬಾಲಕನ ತಂದೆ ತಮ್ಮ ದೂರಿನಲ್ಲಿ, ಫೆಬ್ರವರಿ ೨೩ ರಂದು ಸಂಜೆ ೪ ಗಂಟೆಗೆ ಶಾಲೆ ಮುಗಿದ ನಂತರ ಬಾಬುಗುಡ್ಡೆಯಲ್ಲಿ ರೈಲ್ವೆ ಹಳಿ ಸಮೀಪ ೯ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನು ೧೦ ನೇ ತರಗತಿಯ ಹುಡುಗಿಯೊಂದಿಗೆ ಮಾತನಾಡುತ್ತಿದ್ದನು. ಆ ಸಮಯದಲ್ಲಿ ಅಲ್ಲಿಗೆ ಬಂದ ಸ್ಟೀವನ್ ಮೊಂತೇರೋ ಮತ್ತು ಆತನ ಮಗ ಅವಿಲ್, ಸಾರ್ವಜನಿಕ ಸ್ಥಳದಲ್ಲಿ ಪ್ರೇಮ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರಿಬ್ಬರಿಗೂ ಬೆದರಿಕೆ ಹಾಕಿದ್ದಾರೆ. ಮೊಂತೇರೋ ಮತ್ತು ಆತನ ಮಗ ಅವರಿಬ್ಬರ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿದ್ದಾರೆ. ಅವರು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ಅವಮಾನಕರವಾಗಿ ಜಾತಿ ನಿಂದನೆ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

  • ರಾಜ್ಯದಲ್ಲಿನ ಅಲ್ಪಸಂಖ್ಯಾತ ಪ್ರೇಮಿ ಕಾಂಗ್ರೆಸ್ ಸರಕಾರ ಸಂತ್ರಸ್ತ ಹಿಂದೂಗಳಿಗೆ ನ್ಯಾಯ ಒದಗಿಸಿಕೊಡುತ್ತದೆಯೆಂದು ನಿರೀಕ್ಷಿಸಲು ಸಾಧ್ಯವಿಲ್ಲ!
  • ಮಂಗಳೂರಿನ ಪಬ್‌ ಗಳಲ್ಲಿ ನಡೆಯುವ ಅಪಕೃತ್ಯಗಳನ್ನು ವಿರೋಧಿಸಿದ ಹಿಂದುತ್ವನಿಷ್ಠ ಪ್ರಮೋದ ಮುತಾಲಿಕ್ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸರ ಮೇಲೆ ಒತ್ತಡ ಹೇರುವ ಪ್ರಗತಿ(ಅಧೋ)ಪರರು, ಈಗ ಕ್ರೈಸ್ತ ತಂದೆ-ಮಗ ಹಿಂದೂ ಬಾಲಕನ ಮೇಲೆ ಮಾಡಿದ ಹಲ್ಲೆಯ ಬಗ್ಗೆ ತುಟಿ ಬಿಚ್ಚುತ್ತಿಲ್ಲ ಎಂಬುದನ್ನು ಗಮನಿಸಬೇಕು !