|

ಮಂಗಳೂರು – ಹುಡುಗಿಯೊಬ್ಬಳ ಜೊತೆ ಮಾತನಾಡಿದ್ದಕ್ಕಾಗಿ ಅಪ್ರಾಪ್ತ ಹಿಂದೂ ಬಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಟೀವನ್ ಮೊಂತೇರೋ ಮತ್ತು ಆತನ ಮಗ ಅವಿಲ್ ಎಂಬುವವರನ್ನು ಇತ್ತೀಚೆಗೆ ವಶಕ್ಕೆ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಗುಡ್ಡೆಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ಅಪ್ರಾಪ್ತ ಹಿಂದೂ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂತ್ರಸ್ತ ಬಾಲಕನ ತಂದೆ ತಮ್ಮ ದೂರಿನಲ್ಲಿ, ಫೆಬ್ರವರಿ ೨೩ ರಂದು ಸಂಜೆ ೪ ಗಂಟೆಗೆ ಶಾಲೆ ಮುಗಿದ ನಂತರ ಬಾಬುಗುಡ್ಡೆಯಲ್ಲಿ ರೈಲ್ವೆ ಹಳಿ ಸಮೀಪ ೯ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನು ೧೦ ನೇ ತರಗತಿಯ ಹುಡುಗಿಯೊಂದಿಗೆ ಮಾತನಾಡುತ್ತಿದ್ದನು. ಆ ಸಮಯದಲ್ಲಿ ಅಲ್ಲಿಗೆ ಬಂದ ಸ್ಟೀವನ್ ಮೊಂತೇರೋ ಮತ್ತು ಆತನ ಮಗ ಅವಿಲ್, ಸಾರ್ವಜನಿಕ ಸ್ಥಳದಲ್ಲಿ ಪ್ರೇಮ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರಿಬ್ಬರಿಗೂ ಬೆದರಿಕೆ ಹಾಕಿದ್ದಾರೆ. ಮೊಂತೇರೋ ಮತ್ತು ಆತನ ಮಗ ಅವರಿಬ್ಬರ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿದ್ದಾರೆ. ಅವರು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ಅವಮಾನಕರವಾಗಿ ಜಾತಿ ನಿಂದನೆ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !