
ಚಂಡೀಗಢ – ಇಲ್ಲಿನ ಶಾಲೆಗಳನ್ನು ಬಾಂಬ್ನಿಂದ ಉಡಾಯಿಸುವ ಇ-ಮೇಲ್ ಬೆದರಿಕೆಗಳ ಸರಣಿ ಮತ್ತೆ ಆರಂಭವಾಗಿದೆ. ನಗರದ ವಿವೇಕ್ ಹೈಸ್ಕೂಲ್, ಗುರುಕುಲ ಭವನ ವಿದ್ಯಾಲಯ ಮತ್ತು ಇತರ ಅನೇಕ ಖಾಸಗಿ ಹಾಗೂ ಸರಕಾರಿ ಶಾಲೆಗಳಿಗೆ ಇಂತಹ ಇ-ಮೇಲ್ಗಳು ಬಂದಿವೆ. ಶಾಲಾ ಆಡಳಿತ ಮಂಡಳಿಯು ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂದಿನ 2 ದಿನಗಳಲ್ಲಿ ಇಡೀ ಚಂಡೀಗಢದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸಲಿವೆ ಎಂದು ಬೆದರಿಕೆಯಲ್ಲಿ ತಿಳಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಈ ಇ-ಮೇಲ್ನಲ್ಲಿ ಪಂಜಾಬ್ ಸಚಿವಾಲಯವನ್ನು ಉಡಾಯಿಸುವ ಬೆದರಿಕೆಯೂ ಸೇರಿತ್ತು.
ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಹಿರಿಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಶ್ವಾನ ದಳಗಳು ಸ್ಥಳಕ್ಕೆ ಧಾವಿಸಿವೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಶಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾವಲು ಹೆಚ್ಚಿಸಲಾಗಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಯಾವ ಇ-ಮೇಲ್ ವಿಳಾಸದಿಂದ ಬೆದರಿಕೆ ಹಾಕಲಾಗಿದೆಯೋ, ಆ ವಿಳಾಸವನ್ನು ಪರಿಶೀಲಿಸಲಾಗುತ್ತಿದೆ. ಪೋಷಕರು ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಸಂಶಯಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !