• ೨೫ ವರ್ಷಗಳಿಂದ ಭಾರತದಲ್ಲಿ ಅಕ್ರಮವಾಗಿ ವಾಸ• ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳ ಜಪ್ತಿ |

ಸಹರಾನಪುರ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಭಯೋತ್ಪಾದನಾ ವಿರೋಧಿ ದಳವು ನಗರದ ಕುತುಬಶೇರ್ ಪ್ರದೇಶದ ಏಕತಾ ಕಾಲೋನಿಯಿಂದ ರೋಹಿಂಗ್ಯಾ ಮುಸಲ್ಮಾನನೊಬ್ಬನನ್ನು ಬಂಧಿಸಿದೆ. ಬಂಧಿತನ ಹೆಸರು ಶಹಾಬುದ್ದೀನ್ ಎಂದಾಗಿದ್ದು, ಆತನಿಂದ ಮೊಬೈಲ್ ಫೋನ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಮತ್ತು ಮನೆಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತ ಹಲವು ವರ್ಷಗಳಿಂದ ಈ ಜಿಲ್ಲೆಯಲ್ಲಿ ವಾಸಿಸುತ್ತಿದ್ದನು ಮತ್ತು ಮಾಂಸದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದನು.
೧. ಕಳೆದ ಅನೇಕ ದಿನಗಳಿಂದ ಭಯೋತ್ಪಾದನಾ ವಿರೋಧಿ ದಳಕ್ಕೆ ಮ್ಯಾನ್ಮಾರ್ ನ ಕೆಲವು ಜನರು ಅಕ್ರಮವಾಗಿ ಭಾರತಕ್ಕೆ ನುಗ್ಗಿದ್ದಾರೆ ಮತ್ತು ಅವರು ಸಹರಾನಪುರ ಜಿಲ್ಲೆಯ ಮಾಂಸದ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆಂಬ ಮಾಹಿತಿ ಲಭಿಸಿತ್ತು.
೨. ಪೊಲೀಸರಿಗೆ ಶಹಾಬುದ್ದೀನ್ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಏಕತಾ ಕಾಲೋನಿಯಲ್ಲಿ ಆತನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ ಅವನು ಮೂಲತಃ ಮ್ಯಾನ್ಮಾರ್ ನಿವಾಸಿ ಎಂಬುದು ಬೆಳಕಿಗೆ ಬಂದಿದೆ.
೩. ಆತನ ಜೇಬಿನಿಂದ ಒಂದು ಮೊಬೈಲ್ ಫೋನ್, ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮೀಷನರ್ ಹೆಸರಿರುವ ಒಂದು ನೀಲಿ ಸ್ಲಿಪ್, ಅಧಿಕೃತ ಆಧಾರ್ ಕಾರ್ಡ್ ಅಷ್ಟೇ ಅಲ್ಲದೆ, ಭೂಮಿಯ ದಾಖಲೆಗಳು, ಬ್ಯಾಂಕ್ ಖಾತೆಗಳು, ವಿದ್ಯುತ್ ಬಿಲ್ ರಸೀದಿಗಳು ಇತ್ಯಾದಿಗಳು ಪತ್ತೆಯಾಗಿವೆ.
೪. ವಿಚಾರಣೆಯ ಸಮಯದಲ್ಲಿ ತಾನು ಮೂಲತಃ ಮ್ಯಾನ್ಮಾರ್ ನವನೆಂದು ಮತ್ತು ೨೦-೨೫ ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಮಾಂಸದ ಕಾರ್ಖಾನೆಯಲ್ಲಿ ಕೆಲಸ ಮಾಡಲು ಮತ್ತು ಇತರ ಕೆಲಸಗಳನ್ನು ಮಾಡಲು ಭಾರತೀಯ ಗುರುತಿನ ಚೀಟಿ ಅಗತ್ಯವಾಗಿತ್ತು; ಆದ್ದರಿಂದ ಒಬ್ಬ ದಲ್ಲಾಳಿಯ ಮೂಲಕ ಆಧಾರ್ ಕಾರ್ಡ್ ಪಡೆದಿದ್ದಾಗಿ ತಿಳಿಸಿದ್ದಾನೆ. ಆಧಾರ್ ಕಾರ್ಡ್ ನೀಡಿದ ಆ ದಲ್ಲಾಳಿಯ ಹೆಸರು ನೆನಪಿಲ್ಲ ಎಂದು ಆತ ಹೇಳಿದ್ದಾನೆ.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ