ಬಾಂಬ್ ಸ್ಫೋಟಕ್ಕೆ ಸಹಾಯ ಮಾಡಿದ ಆರೋಪ

ಕೊಲೊಂಬೊ (ಶ್ರೀಲಂಕಾ) – ಶ್ರೀಲಂಕಾದಲ್ಲಿ 2019 ರ ‘ಈಸ್ಟರ್ ಸಂಡೇ’ ದಿನದಂದು ಚರ್ಚ್ಗಳಲ್ಲಿ ನಡೆದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಮಾಜಿ ಗುಪ್ತಚರ ಮುಖ್ಯಸ್ಥ ಮೇಜರ್ ಜನರಲ್ ಸುರೇಶ್ ಸ್ಯಾಲಿ ಅವರನ್ನು ಬಂಧಿಸಲಾಗಿದೆ. ಈ ಸ್ಫೋಟಕ್ಕಾಗಿ ಭಯೋತ್ಪಾದಕರ ಯೋಜನೆ ಮತ್ತು ಅವರಿಗೆ ಸಹಾಯ ಮಾಡುವಲ್ಲಿ ಸ್ಯಾಲಿ ಪ್ರಮುಖ ಪಾತ್ರ ವಹಿಸಿದ್ದಾರೆಂಬ ಆರೋಪವಿದೆ. ರಾಜಪಕ್ಸೆ ಕುಟುಂಬಕ್ಕೆ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡಲು ದೇಶದಲ್ಲಿ ಭೀತಿಯ ವಾತಾವರಣ ನಿರ್ಮಿಸುವ ಉದ್ದೇಶದಿಂದ ಸ್ಯಾಲಿ ಈ ಬಾಂಬ್ ಸ್ಫೋಟಗಳನ್ನು ಮಾಡಿಸಿದ್ದಾರೆಂದು ಬ್ರಿಟನ್ನ ‘ಚಾನೆಲ್ 4’ ಸುದ್ದಿ ಸಂಸ್ಥೆಯ ಸಾಕ್ಷ್ಯಚಿತ್ರವೊಂದು ಹೇಳಿದೆ.
ಭಾರತವು ಈ ಬಾಂಬ್ ಸ್ಫೋಟಗಳಿಗಿಂತ ಕೆಲವು ವಾರಗಳ ಮೊದಲೇ ಶ್ರೀಲಂಕಾದ ಗುಪ್ತಚರ ಸಂಸ್ಥೆಗೆ ಈ ಬಗ್ಗೆ ಮಾಹಿತಿ ನೀಡಿತ್ತು; ಆದರೂ ಬಾಂಬ್ ಸ್ಫೋಟಗಳನ್ನು ತಡೆಯಲು ಸಾಧ್ಯವಾಗಲಿಲ್ಲ. ಈ ಸ್ಫೋಟಗಳಲ್ಲಿ 250ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗಳನ್ನು ಸ್ಥಳೀಯ ಜಿಹಾದಿ ಸಂಘಟನೆಗಳಾದ ನ್ಯಾಷನಲ್ ತೌಹೀದ್ ಜಮಾತ್ (NTJ) ಮತ್ತು ಜಮಿಯಾತುಲ್ ಮಿಲಾತು ಇಬ್ರಾಹಿಂ ಜಂಟಿಯಾಗಿ ನಡೆಸಿದ್ದವು. ಸ್ಫೋಟದ ಸಮಯದಲ್ಲಿ ಶ್ರೀಲಂಕಾದಲ್ಲಿ ರಾನಿಲ್ ವಿಕ್ರಮಸಿಂಘೆ ಅವರ ಸರಕಾರವಿತ್ತು. ಈ ಘಟನೆಯ ಬಳಿಕ ಗುಪ್ತಚರ ಇಲಾಖೆಯ ವೈಫಲ್ಯದ ಬಗ್ಗೆ ವಿಕ್ರಮಸಿಂಘೆ ಅವರ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !