ವಿಶೇಷ ಸಮಿತಿಯಿಂದ ಕಾಯ್ದೆಯ ಕರಡು ವಿಧಿ ನ್ಯಾಯ ಇಲಾಖೆಗೆ ರವಾನೆ !

ಮುಂಬಯಿ – ಮಹಾರಾಷ್ಟ್ರದಲ್ಲಿ ‘ಲವ್ ಜಿಹಾದ್’ ವಿರೋಧಿ ಕಾಯ್ದೆ ಜಾರಿಗೆ ತರಲು ವಿಶೇಷ ಸಮಿತಿಯ ಸಭೆಗಳಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಸಮಿತಿಯು ಸಿದ್ಧಪಡಿಸಿದ ಕರಡನ್ನು ವಿಧಿ ನ್ಯಾಯ ಇಲಾಖೆಗೆ ಕಳುಹಿಸಿಕೊಡಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿಯ ಸಭೆಗಳು ನಡೆದವು. ಈ ಉನ್ನತ ಮಟ್ಟದ ಸಮಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ವಿಧಿ ಮತ್ತು ನ್ಯಾಯ ಇಲಾಖೆ, ಹಾಗೆಯೇ ಸಾಮಾಜಿಕ ನ್ಯಾಯ ಮತ್ತು ಗೃಹ ಇಲಾಖೆಯ ಕಾರ್ಯದರ್ಶಿಗಳು ಒಳಗೊಂಡಿದ್ದಾರೆ. ಭಿಗವಣ್ ಪ್ರದೇಶದ ಹಿಂದೂ ಯುವತಿಯ ಅಪಹರಣದ ಘಟನೆಯ ಹಿನ್ನೆಲೆಯಲ್ಲಿ ಈ ಕಾಯ್ದೆಯನ್ನು ಶೀಘ್ರವಾಗಿ ತರಲು ಪ್ರಯತ್ನಗಳು ನಡೆಯುತ್ತಿವೆ.
ದೇಶದಲ್ಲಿ ಈ ಹಿಂದೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ, ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಲವ್ ಜಿಹಾದ್ ಮತ್ತು ಮತಾಂತರ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಎಲ್ಲಾ ರಾಜ್ಯಗಳ ಕಾಯ್ದೆಗಳನ್ನು ಉನ್ನತ ಮಟ್ಟದ ಸಮಿತಿಯು ಕೂಲಂಕಷವಾಗಿ ಅಧ್ಯಯನ ಮಾಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!