ರಾಜಸ್ಥಾನದ ೩ ನಗರಗಳ ಮರುನಾಮಕರಣ

ಜಯಪುರ (ರಾಜಸ್ಥಾನ) – ರಾಜಸ್ಥಾನ ಸರಕಾರವು ೩ ನಗರಗಳ ಹೆಸರುಗಳನ್ನು ಬದಲಾಯಿಸುವುದಾಗಿ ಘೋಷಿಸಿದೆ. ಮೌಂಟ್ ಅಬೂ ಅನ್ನು ‘ಅಬೂರಾಜ’, ಜಹಾಜಪುರವನ್ನು ‘ಯಜ್ಞಪುರ’ ಮತ್ತು ಕಾಮಾ ನಗರದ ಹೆಸರನ್ನು ‘ಕಾಮವನ’ ಎಂದು ಮರುನಾಮಕರಣ ಮಾಡಲಾಗಿದೆ. ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಅವರು ವಿಧಾನಸಭೆಯಲ್ಲಿ ರಾಜ್ಯದ ಬಜೆಟ್ ಚರ್ಚೆಯ ಸಂದರ್ಭದಲ್ಲಿ ಈ ಘೋಷಣೆ ಮಾಡಿದರು.
ಸ್ಥಳೀಯ ನಾಗರಿಕರ ಬೇಡಿಕೆ, ಐತಿಹಾಸಿಕ ಸಂದರ್ಭ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಿ ಮರುನಾಮಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಹೇಳಿದರು.
ಕಾಂಗ್ರೆಸ್ ವಿರೋಧ
ರಾಜಸ್ಥಾನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ವರ್ಣಿಮ್ ಚತುರ್ವೇದಿ ಅವರು ಈ ಬಗ್ಗೆ ಮಾತನಾಡಿ, ಈ ನಗರಗಳಲ್ಲಿ ರಸ್ತೆ, ನೀರು, ಆರೋಗ್ಯ ಮತ್ತು ಉದ್ಯೋಗದಂತಹ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವುದು ಹೆಸರುಗಳನ್ನು ಬದಲಾಯಿಸುವುದಕ್ಕಿಂತ ಹೆಚ್ಚು ಅಗತ್ಯವಾಗಿದೆ ಎಂದು ಟೀಕಿಸಿದರು. ಸರಕಾರವು ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು. (ಅತ್ಯಾಚಾರಿ ಮುಸಲ್ಮಾನರು ಮತ್ತು ಬ್ರಿಟಿಷರು ನೀಡಿದ ಹೆಸರುಗಳನ್ನು ಬದಲಾಯಿಸಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿಡುವುದು ಸ್ವಾತಂತ್ರ್ಯದ ನಂತರವೇ ಮಾಡಬೇಕಿತ್ತು; ಆದರೆ ಮೊಘಲರು ಮತ್ತು ಬ್ರಿಟಿಷರ ವೈಚಾರಿಕ ಗುಲಾಮಗಿರಿ ಮಾಡುವ ಕಾಂಗ್ರೆಸ್ ಈ ಕೆಲಸ ಮಾಡಲು ಬಯಸಲಿಲ್ಲ. ಈಗಿನ ನಾಯಕರು ಅದನ್ನು ಮಾಡುತ್ತಿದ್ದರೆ ಕಾಂಗ್ರೆಸ್ಸಿಗೆ ಅಸೂಯೆಯಾಗುತ್ತಿದೆ. ಇಂತಹ ಕಾಂಗ್ರೆಸ್ಸಿನಿಂದ ಭಾರತವನ್ನು ಮುಕ್ತಗೊಳಿಸುವುದು ಅತ್ಯಂತ ಅವಶ್ಯಕವಾಗಿದೆ- ಸಂಪಾದಕರು).
ಸಂಪಾದಕೀಯ ನಿಲುವುಹೀಗೆ ಒಂದೊಂದಾಗಿ ಮರುನಾಮಕರಣ ಮಾಡುವ ಬದಲು ದೇಶಾದ್ಯಂತ ಒಂದೇ ಆದೇಶದ ಮೂಲಕ ಎಲ್ಲಾ ಹೆಸರುಗಳನ್ನು ಬದಲಾಯಿಸುವ ನಿರ್ಧಾರವನ್ನು ಯಾಕೆ ತೆಗೆದುಕೊಳ್ಳಬಾರದು? |
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ