ಸೂರತ್ (ಗುಜರಾತ್): ಗೋಹತ್ಯೆ ತನಿಖೆಗೆ ತೆರಳಿದ್ದ ಪೊಲೀಸರು ಮತ್ತು ಗೋರಕ್ಷಕರ ಮೇಲೆ ಮುಸ್ಲಿಂ ಗುಂಪಿನಿಂದ ಹಲ್ಲೆ

  • ಹಲ್ಲೆಯಲ್ಲಿ ಓರ್ವ ಪೊಲೀಸ್ ಮತ್ತು ಓರ್ವ ಗೋರಕ್ಷಕನಿಗೆ ಗಂಭೀರ ಗಾಯ

  • ಘಟನೆಗೆ ಸಂಬಂಧಿಸಿದಂತೆ ೨೨ ಮುಸ್ಲಿಮರ ಬಂಧನ

ಸೂರತ್ (ಗುಜರಾತ್) – ಸೂರತ್ ಜಿಲ್ಲೆಯ ಹತೋಡಾ ಗ್ರಾಮದಲ್ಲಿ ಗೋಹತ್ಯೆ ನಡೆದಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ತನಿಖೆ ನಡೆಸಲು ತೆರಳಿದ್ದ ಪೊಲೀಸ್ ತಂಡ ಮತ್ತು ಗೋರಕ್ಷಕರ ಮೇಲೆ ಮುಸ್ಲಿಂ ಸಮುದಾಯದ ಕೆಲವರು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ಗೋರಕ್ಷಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಫೆಬ್ರವರಿ ೨೫ ರಂದು ನಡೆದ ಈ ಘಟನೆಯ ನಂತರ, ಪೊಲೀಸರು ಗ್ರಾಮದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿ ೨೨ ಜನರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರೇ ದೂರುದಾರರಾಗಿ ಮೊಕದ್ದಮೆ ದಾಖಲಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾಗ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ಕೆಲವರು ವಾಗ್ವಾದಕ್ಕಿಳಿದಿದ್ದಾರೆ. ಈ ವಾಗ್ವಾದವು ವಿಕೋಪಕ್ಕೆ ತಿರುಗಿ ಪೊಲೀಸರು ಮತ್ತು ಗೋರಕ್ಷಕರ ಮೇಲೆ ಹಲ್ಲೆ ನಡೆದಿದೆ. ಈ ಸಂದರ್ಭದಲ್ಲಿ ಸುಮಾರು ೫೦ಕ್ಕೂ ಹೆಚ್ಚು ಜನರಿದ್ದ ಗುಂಪು ತಲ್ವಾರ್ ಹಾಗೂ ಕಬ್ಬಿಣದ ಪೈಪ್‌ಗಳಂತಹ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಸಂಪಾದಕೀಯ ನಿಲುವು

ಗುಜರಾತ್‌ನಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಬಿಜೆಪಿ ಸರ್ಕಾರವಿದ್ದರೂ ಗೋಹತ್ಯೆ ಮತ್ತು ಇಂತಹ ದಾಳಿಗಳು ಹೇಗೆ ನಡೆಯುತ್ತವೆ ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಮೂಡುತ್ತಿದೆ.