ಹಿಂದೂ ವಿದ್ಯಾರ್ಥಿಗಳಿಂದ ಹನುಮಾನ್ ಚಾಲೀಸಾ ಪಠಣ ಮಾಡಿ ಕ್ರಮಕ್ಕೆ ಒತ್ತಾಯ

ನಾಸಿಕ್ – ನಗರದ ತ್ರಯಂಬಕ್ ರಸ್ತೆಯಲ್ಲಿರುವ ‘ಸಂದೀಪ್ ಫೌಂಡೇಶನ್’ ಎಂಬ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕೋರ್ಸ್ಗಳ ವಿಶ್ವವಿದ್ಯಾಲಯದ ಕೋಣೆಯೊಂದರಲ್ಲಿ ಅನೇಕ ಮುಸ್ಲಿಂ ವಿದ್ಯಾರ್ಥಿಗಳು ನಮಾಜ್ ಮಾಡಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಹಿಂದುತ್ವವಾದಿ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಘಟನೆಯ ನಂತರ ಹಿಂದೂ ವಿದ್ಯಾರ್ಥಿಗಳು ಮತ್ತು ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಕಾಲೇಜಿನ ಮೈದಾನದಲ್ಲೇ ‘ಹನುಮಾನ್ ಚಾಲೀಸಾ’ ಪಠಿಸಿದರು. ‘ಈ ವಿಶ್ವವಿದ್ಯಾಲಯದಲ್ಲಿ ಹಿಂದೂ ಹಬ್ಬಗಳನ್ನು ಆಚರಿಸಲು ನಿಷೇಧವಿದೆ. ಹೀಗಿರುವಾಗ ಮುಸ್ಲಿಂ ವಿದ್ಯಾರ್ಥಿಗಳ ನಮಾಜ್ ಹೇಗೆ ನಡೆಯುತ್ತದೆ?’ ಎಂದು ಹಿಂದೂ ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.
೧. ‘ಈ ಪ್ರಕರಣದಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಪ್ರಕರಣ ದಾಖಲಿಸಲು ಪ್ರಯತ್ನಿಸಬೇಕು’ ಎಂದು ಹಿಂದೂ ವಿದ್ಯಾರ್ಥಿಗಳು ಒತ್ತಾಯಿಸಿದರು.
೨. ಹಿಂದುತ್ವವಾದಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಗಂಭೀರವಾದ ಘಟನೆ ಎಂದು ಹೇಳಿದ್ದಾರೆ. ಇದರಿಂದ ಕಾಲೇಜಿನ ವಾತಾವರಣ ಕೆಡುತ್ತಿದೆ ಎಂದು ತಿಳಿಸಿರುವ ಅವರು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಆಡಳಿತ ಮಂಡಳಿಯನ್ನು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!