
ಶಿವಮೊಗ್ಗ – ‘ಒಂದೆಡೆ ಶಾಂತಿಯ ಮಂತ್ರ ಜಪಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದೆಡೆ ಯುದ್ಧ ಮಾಡುತ್ತಾರೆ. ಅವರ ಈ ಪರಸ್ಪರ ವಿರೋಧಿ ನಿಲುವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ’, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಗೆ ಹೋಗುವ ದಾರಿಯಲ್ಲಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಅತ್ಯಂತ ಖಂಡನೀಯ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಹೇಳಿದರು.
ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ನಾವು ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿದ್ದೇವೆ. ಈ ಬಗ್ಗೆ ನಾವು ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮುಖ್ಯಮಂತ್ರಿ ಹೇಳಿದರು.
ಸಂಪಾದಕೀಯ ನಿಲುವು
|
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!