
ಚಿಕ್ಕಬಳ್ಳಾಪುರ – ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮೇನಿ ಹತ್ಯೆಯಾದ ಹಿನ್ನೆಲೆಯಲ್ಲಿ ಇಲ್ಲಿ ಶೋಕ ವ್ಯಕ್ತಪಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪಕ್ಕದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಆಲಿಪುರ ಗ್ರಾಮದಲ್ಲಿ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತಿದೆ. ಗ್ರಾಮಸ್ಥರು ಅಂಗಡಿ ಮುಂಗಟ್ಟು ಹಾಗೂ ಮಾರುಕಟ್ಟೆಗಳನ್ನು ಬಂದ್ ಮಾಡುವ ಮೂಲಕ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.
ಖಾಮೇನಿ ಮತ್ತು ಚಿಕ್ಕಬಳ್ಳಾಪುರದ ನಡುವೆ ಹಳೆಯ ಸಂಬಂಧವಿದೆ. 1986ರಲ್ಲಿ ಖಾಮೇನಿ ಅವರು ಆಲಿಪುರ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಭೇಟಿಯ ನೆನಪುಗಳು ಇಂದಿಗೂ ಸ್ಥಳೀಯರ ಮನಸ್ಸಿನಲ್ಲಿ ಹಸಿರಾಗಿವೆ. ಆಲಿಪುರದ ಸುಮಾರು 20,000 ಶಿಯಾ ಮುಸ್ಲಿಮರು ಖಾಮೇನಿ ಅವರನ್ನು ತಮ್ಮ ‘ಧರ್ಮಗುರು’ ಎಂದು ಪರಿಗಣಿಸುತ್ತಾರೆ. ಖಾಮೇನಿ ಅವರ ಹೆಸರಿನಲ್ಲಿ ಆಲಿಪುರದಲ್ಲಿ ಇಂದಿಗೂ ಒಂದು ಖಾಸಗಿ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ.
ಸಂಪಾದಕೀಯ ನಿಲುವುಒಂದು ವೇಳೆ ಭವಿಷ್ಯದಲ್ಲಿ ಭಾರತವು ಇರಾನ್ ವಿರುದ್ಧ ನಿಲ್ಲಬೇಕಾದ ಸಂದರ್ಭ ಬಂದರೆ, ಈ ಮುಸ್ಲಿಮರು ಯಾರ ಪರವಾಗಿ ನಿಲ್ಲುತ್ತಾರೆ ಎಂದು ಯಾರಾದರೂ ಕೇಳುವರೇ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!