ಎರಡೂ ಕಡೆಯ ಕುಟುಂಬಸ್ಥರ ಉಪಸ್ಥಿತಿ

ರಾಯ್ ಬರೇಲಿ (ಉತ್ತರ ಪ್ರದೇಶ) – ಇಲ್ಲಿ ಇತ್ತೀಚೆಗೆ ನಾಝಿಯಾ ಎಂಬ ಹೆಸರಿನ ೧೯ ವರ್ಷದ ಮುಸ್ಲಿಂ ಯುವತಿಯು ಹಿಂದೂ ಧರ್ಮವನ್ನು ಸ್ವೀಕರಿಸಿ ಸ್ವತಃ ತನ್ನ ಹೆಸರನ್ನು ‘ಮೀನಾಕ್ಷಿ’ ಎಂದು ಬದಲಾಯಿಸಿಕೊಂಡಳು. ಆ ನಂತರ ವಿಕಾಸ್ ಎಂಬ ೨೦ ವರ್ಷದ ಹಿಂದೂ ಪ್ರಿಯಕರನ ಜೊತೆ ವಿವಾಹವಾದಳು. ಈ ವಿವಾಹವು ಸಿವಿಲ್ ನ್ಯಾಯಾಲಯದ ಆವರಣದಲ್ಲಿರುವ ಶಿವನ ದೇವಾಲಯದಲ್ಲಿ ಸಾಂಪ್ರದಾಯಿಕ ಹಿಂದೂ ವಿಧಿ-ವಿಧಾನಗಳೊಂದಿಗೆ ನೆರವೇರಿತು. ಈ ಸಮಾರಂಭದಲ್ಲಿ ಎರಡೂ ಕುಟುಂಬಗಳ ಸದಸ್ಯರು ಉಪಸ್ಥಿತರಿದ್ದರು. ಅಲ್ಲದೆ ವಿಶ್ವ ಹಿಂದೂ ಪರಿಷತ್ತಿನ ಕೆಲವು ಪದಾಧಿಕಾರಿಗಳೂ ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಕುರಿತಾದ ಒಂದು ವರದಿಯ ಪ್ರಕಾರ, ಸುಮಾರು ಎರಡು ವರ್ಷಗಳ ಹಿಂದೆ ರಾಯ್ ಬರೇಲಿಯ ಧೌರಹರಾ ಗ್ರಾಮದ ನಿವಾಸಿ ವಿಕಾಸ್ ಮತ್ತು ನಗರ ಕೊತ್ವಾಲಿ ವ್ಯಾಪ್ತಿಯ ಶೇಖವಾಡಾ ಪ್ರದೇಶದ ನಾಝಿಯಾ ಎಂಬುವವರ ಪರಿಚಯವಾಗಿತ್ತು. ಈ ಪರಿಚಯವು ಮುಂದೆ ಪ್ರೇಮಕ್ಕೆ ಪರಿವರ್ತನೆಯಾಗಿ ಇಬ್ಬರೂ ಜೊತೆಯಾಗಿ ಜೀವನ ನಡೆಸಲು ತೀರ್ಮಾನಿಸಿದರು.
ಸಂಪಾದಕೀಯ ನಿಲುವುಜಾತ್ಯತೀತವಾದಿಗಳು ಅನ್ಯ ಇಂತಹ ಘಟನೆಯಲ್ಲಿ ಮಾಡುವಂತೆ, ಈ ಘಟನೆಯನ್ನು ಬಂಡವಾಳ ಮಾಡಿಕೊಂಡು ‘ಇದು ಜಾತ್ಯತೀತತೆಗೆ ಆದರ್ಶ’ ಎಂಬ ರೀತಿಯಲ್ಲಿ ಪ್ರಚಾರ ಮಾಡುವುದಿಲ್ಲ, ಎಂಬುದನ್ನು ಗಮನದಲ್ಲಿಡಿ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!