|

ಪಾಲಘರ್ (ಮಹಾರಾಷ್ಟ್ರ) – ಜಿಲ್ಲೆಯ ತಾರಾಪುರ ಕೈಗಾರಿಕಾ ವಲಯದಲ್ಲಿರುವ ‘ಭಗೇರಿಯಾ ಕೆಮಿಕಲ್’ ಎಂಬ ಕಾರ್ಖಾನೆಯಲ್ಲಿ ‘ಓಲಿಯಂ’ ಎಂಬ ಅಪಾಯಕಾರಿ ಅನಿಲ ಸೋರಿಕೆಯಾಗಿದೆ. ಮಾರ್ಚ್ 2ರಂದು ಮಧ್ಯಾಹ್ನ ‘ಪ್ಲಾಟ್ ಸಂಖ್ಯೆ ಡಿ-17’ರಲ್ಲಿರುವ ಕಾರ್ಖಾನೆಯಲ್ಲಿ ಹಠಾತ್ತಾಗಿ ಬೆಂಕಿ ಕಾಣಿಸಿಕೊಂಡಿತು. ಈ ಅನಿಲ ಕೂಡಲೇ ಗಾಳಿಯಲ್ಲಿ ಹರಡಿದ್ದರಿಂದ, ಕಾರ್ಖಾನೆಯಿಂದ 3-4 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ನಾಗರಿಕರಿಗೆ ಕಣ್ಣು ಉರಿ, ಕೆಮ್ಮು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿತು.
ಮುನ್ನೆಚ್ಚರಿಕಾ ಕ್ರಮವಾಗಿ ತಾರಾಪುರ ವಿದ್ಯಾಮಂದಿರದ 1,600 ವಿದ್ಯಾರ್ಥಿಗಳು ಹಾಗೂ ದುರ್ಘಟನೆ ನಡೆದ ಕಾರ್ಖಾನೆ ಸೇರಿದಂತೆ ಸುತ್ತಮುತ್ತಲಿನ ಇತರ ಕೈಗಾರಿಕೆಗಳ 1,000 ಕಾರ್ಮಿಕರು ಮತ್ತು ನಾಗರಿಕರು ಸೇರಿದಂತೆ ಒಟ್ಟು ಅಂದಾಜು 2,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ 3 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ಓಲಿಯಂ ಅನಿಲ ಸೋರಿಕೆಯನ್ನು ನಿಯಂತ್ರಣಕ್ಕೆ ತಂದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಸಹಾಯಕ್ಕಾಗಿ ಸ್ಥಳಕ್ಕೆ ಆಗಮಿಸಿತ್ತು. ಕಾರ್ಖಾನೆಯ ಐವರು ಕಾರ್ಮಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದಾಗ್ಯೂ, ತಾರಾಪುರ ಕೈಗಾರಿಕಾ ಪ್ರದೇಶದ ಸುರಕ್ಷತೆಯ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!