|

ಪಾಲಘರ್ (ಮಹಾರಾಷ್ಟ್ರ) – ಜಿಲ್ಲೆಯ ತಾರಾಪುರ ಕೈಗಾರಿಕಾ ವಲಯದಲ್ಲಿರುವ ‘ಭಗೇರಿಯಾ ಕೆಮಿಕಲ್’ ಎಂಬ ಕಾರ್ಖಾನೆಯಲ್ಲಿ ‘ಓಲಿಯಂ’ ಎಂಬ ಅಪಾಯಕಾರಿ ಅನಿಲ ಸೋರಿಕೆಯಾಗಿದೆ. ಮಾರ್ಚ್ 2ರಂದು ಮಧ್ಯಾಹ್ನ ‘ಪ್ಲಾಟ್ ಸಂಖ್ಯೆ ಡಿ-17’ರಲ್ಲಿರುವ ಕಾರ್ಖಾನೆಯಲ್ಲಿ ಹಠಾತ್ತಾಗಿ ಬೆಂಕಿ ಕಾಣಿಸಿಕೊಂಡಿತು. ಈ ಅನಿಲ ಕೂಡಲೇ ಗಾಳಿಯಲ್ಲಿ ಹರಡಿದ್ದರಿಂದ, ಕಾರ್ಖಾನೆಯಿಂದ 3-4 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ನಾಗರಿಕರಿಗೆ ಕಣ್ಣು ಉರಿ, ಕೆಮ್ಮು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿತು.
ಮುನ್ನೆಚ್ಚರಿಕಾ ಕ್ರಮವಾಗಿ ತಾರಾಪುರ ವಿದ್ಯಾಮಂದಿರದ 1,600 ವಿದ್ಯಾರ್ಥಿಗಳು ಹಾಗೂ ದುರ್ಘಟನೆ ನಡೆದ ಕಾರ್ಖಾನೆ ಸೇರಿದಂತೆ ಸುತ್ತಮುತ್ತಲಿನ ಇತರ ಕೈಗಾರಿಕೆಗಳ 1,000 ಕಾರ್ಮಿಕರು ಮತ್ತು ನಾಗರಿಕರು ಸೇರಿದಂತೆ ಒಟ್ಟು ಅಂದಾಜು 2,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ 3 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ಓಲಿಯಂ ಅನಿಲ ಸೋರಿಕೆಯನ್ನು ನಿಯಂತ್ರಣಕ್ಕೆ ತಂದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಸಹಾಯಕ್ಕಾಗಿ ಸ್ಥಳಕ್ಕೆ ಆಗಮಿಸಿತ್ತು. ಕಾರ್ಖಾನೆಯ ಐವರು ಕಾರ್ಮಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದಾಗ್ಯೂ, ತಾರಾಪುರ ಕೈಗಾರಿಕಾ ಪ್ರದೇಶದ ಸುರಕ್ಷತೆಯ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ