ಹೊಸ ಮುಖ್ಯಮಂತ್ರಿ ಹೆಸರಿನ ಬಗ್ಗೆ ಚರ್ಚೆ; ವಿರೋಧ ಪಕ್ಷಗಳಿಂದ ಬಿಜೆಪಿ ವಿರುದ್ಧ ಟೀಕೆ

ಪಾಟಲಿಪುತ್ರ (ಬಿಹಾರ): ಸತತ 20 ವರ್ಷಗಳ ಕಾಲ ಬಿಹಾರದ ಮುಖ್ಯಮಂತ್ರಿಯಾಗಿದ್ದ ನಿತೀಶ ಕುಮಾರ ಅವರು ಈಗ ರಾಜ್ಯಸಭೆಗೆ ತೆರಳಲಿದ್ದಾರೆ. ಮಾರ್ಚ್ 5ರ ಮಧ್ಯಾಹ್ನ ‘ಎಕ್ಸ್’ (ಟ್ವಿಟರ್) ಮೂಲಕ ಅವರು ಈ ಮಾಹಿತಿಯನ್ನು ನೀಡಿ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಇದಕ್ಕಾಗಿ ಅವರು ರಾಜ್ಯಸಭಾ ಸದಸ್ಯತ್ವದ ನಾಮಪತ್ರವನ್ನೂ ಸಲ್ಲಿಸಿದ್ದಾರೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕುಮಾರ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ ಶಾಹ ಮತ್ತು ಬಿಜೆಪಿಯ ನೂತನ ಅಧ್ಯಕ್ಷ ನಿತೀನ ನಬಿನರು ಉಪಸ್ಥಿತರಿದ್ದರು. ನಿತೀಶ ಕುಮಾರ ಅವರ ಈ ನಿರ್ಧಾರದಿಂದ ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ವಿರೋಧ ಪಕ್ಷಗಳು ಬಿಜೆಪಿಯನ್ನು ಟೀಕಿಸುತ್ತಿದ್ದು, ಬಿಹಾರದಲ್ಲಿ ಬಿಜೆಪಿಯು ಮಹಾರಾಷ್ಟ್ರದ ಮಾದರಿಯಲ್ಲಿ ರಾಜಕೀಯದಾಟವಾಡುತ್ತಿದೆ ಎಂದು ಆರೋಪಿಸುತ್ತಿವೆ.
Bihar CM #NitishKumar set to move to the Rajya Sabha.
Discussions are underway on who will be the next Chief Minister of Bihar. Meanwhile, the Opposition has started targeting the BJP over the development.
“My support and guidance will remain with the new government in Bihar,”… pic.twitter.com/0tSGePic10
— Sanatan Prabhat (@SanatanPrabhat) March 5, 2026
“ಬಿಹಾರದ ಹೊಸ ಸರಕಾರಕ್ಕೆ ನನ್ನ ಬೆಂಬಲ ಮತ್ತು ಮಾರ್ಗದರ್ಶನ ಇರಲಿದೆ!” – ನಿತೀಶ ಕುಮಾರ

ನಿತೀಶ ಕುಮಾರ ಅವರು ತಮ್ಮ ನಿಲುವನ್ನು ವ್ಯಕ್ತಪಡಿಸುತ್ತಾ ಮುಂದಿನಂತೆ ಹೇಳಿದ್ದಾರೆ, “ಕಳೆದ ಎರಡು ದಶಕಗಳಿಂದ ಬಿಹಾರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಆ ಬಲದಿಂದಲೇ ನಾವು ಬಿಹಾರದ ಸೇವೆ ಮಾಡಿದ್ದೇವೆ. ಜನರ ವಿಶ್ವಾಸ ಮತ್ತು ಬೆಂಬಲದಿಂದಾಗಿಯೇ ಬಿಹಾರ ಇಂದು ಅಭಿವೃದ್ಧಿಯ ಹಾದಿಯಲ್ಲಿದೆ. ನನ್ನ ಸಂಸದೀಯ ವೃತ್ತಿಜೀವನದ ಆರಂಭದಿಂದಲೂ ಬಿಹಾರದ ವಿಧಾನಮಂಡಲದ ಎರಡೂ ಸದನಗಳು ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯನಾಗಬೇಕು ಎಂಬ ಆಸೆ ಇತ್ತು. ಹಾಗಾಗಿಯೇ ಈ ಬಾರಿ ನಡೆಯುತ್ತಿರುವ ರಾಜ್ಯಸಭಾ ಚುನಾವಣೆಗೆ ನಾನು ನಾಮಪತ್ರ ಸಲ್ಲಿಸುತ್ತಿದ್ದೇನೆ. ಬಿಹಾರದಲ್ಲಿ ಅಸ್ತಿತ್ವಕ್ಕೆ ಬರುವ ಹೊಸ ಸರಕಾರಕ್ಕೆ ನನ್ನ ಸಂಪೂರ್ಣ ಬೆಂಬಲ ಮತ್ತು ಮಾರ್ಗದರ್ಶನ ಇರುತ್ತದೆ.”
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ