ಹಿಂದೂ ಯುವಕರಿಂದ ಮೌಲ್ವಿ ಮೇಲೆ ಹಲ್ಲೆಯೆಂದು ಸುಳ್ಳು ಆರೋಪ

ಬೀದರ್ – ಜಿಲ್ಲೆಯ ಐತಿಹಾಸಿಕ ನಗರಿ ಬಸವಕಲ್ಯಾಣದಲ್ಲಿ ಮುಸ್ಲಿಂ ಮೌಲ್ವಿಯ ಮೇಲೆ ಹಿಂದೂ ಯುವಕರು ಹಲ್ಲೆ ಮಾಡಿದ್ದಾರೆ ಎಂಬ ಕಲ್ಪಿತ ಆರೋಪ ಹೊರಿಸಿ, ಸಾವಿರಾರು ಮುಸ್ಲಿಮರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು. “ಮೌಲ್ವಿ (ಇಸ್ಲಾಂ ಧರ್ಮಗುರು) ಮೇಲೆ ಹಲ್ಲೆ ಮಾಡಿದ ಹಿಂದೂಗಳನ್ನು ತಕ್ಷಣ ನಮಗೆ ಒಪ್ಪಿಸಿ” ಎಂದು ಒತ್ತಾಯಿಸಿ ಗುಂಪು ಠಾಣೆಯ ಮುಂದೆ ಭಾರಿ ಗದ್ದಲ ಸೃಷ್ಟಿಸಿತು. ಸಾವಿರಾರು ಮುಸ್ಲಿಮರು ಹಠಾತ್ತನೆ ಠಾಣೆಯ ಮೇಲೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಈ ಸಂಘರ್ಷದ ವೇಳೆ ಗುಂಪು ಠಾಣೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿತು. ಜನಸಮೂಹವನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.
Bidar, Karnataka: Muslim mob storms a police station and vandalises property over baseless claims that a Hindu youth attacked a Maulvi.
Such mob behaviour inside a police station shows a worrying trend; fear of law enforcement seems to be fading. 🚨pic.twitter.com/gQfEg7FjwS
— Sanatan Prabhat (@SanatanPrabhat) March 6, 2026
ಈ ಘಟನೆಯ ಗಂಭೀರತೆಯನ್ನು ಅರಿತ ಉತ್ತರ ವಲಯದ ಪೊಲೀಸ್ ಐಜಿಪಿ ಮತ್ತು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಬಸವಕಲ್ಯಾಣಕ್ಕೆ ಧಾವಿಸಿದರು. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಪೊಲೀಸ್ ಠಾಣೆಗೆ ನುಗ್ಗಿ ಸರ್ಕಾರಿ ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರು ಒಟ್ಟು ೪೯ ಮುಸ್ಲಿಂ ಯುವಕರ ವಿರುದ್ಧ ವಿವಿಧ ಕಲಂ ಅಡಿ ಮೊಕದ್ದಮೆ ದಾಖಲಿಸಿದ್ದಾರೆ.
ಸಂಪಾದಕೀಯ ನಿಲುವುಪೊಲೀಸ್ ಠಾಣೆಗೆ ನುಗ್ಗಿ ವಿಧ್ವಂಸಕ ಕೃತ್ಯ ಎಸಗುವ ಮುಸ್ಲಿಮರ ಗುಂಪುಗಾರಿಕೆ! ಇದು ಅವರಿಗೆ ಪೊಲೀಸರ ಬಗ್ಗೆ ಕಿಂಚಿತ್ತೂ ಭಯವಿಲ್ಲ ಎಂಬುದರ ಸಂಕೇತವಾಗಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!