
ಚಾಮರಾಜನಗರ (ಕರ್ನಾಟಕ) – ಇಂದು ಇಡೀ ಜಗತ್ತು ಯುದ್ಧದ ಕರಿಛಾಯೆಯಲ್ಲಿ ಬದುಕುತ್ತಿದೆ. ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ಜಾಗತಿಕ ಶಾಂತಿಗಾಗಿ ಅತ್ಯಂತ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಜಗತ್ತಿನಲ್ಲಿ ಶಾಂತಿ ಮತ್ತು ಸೌಖ್ಯವನ್ನು ಸ್ಥಾಪಿಸಬೇಕಾದರೆ, ಅದು ಕೇವಲ ಆಧ್ಯಾತ್ಮಿಕ ಮಾರ್ಗದಿಂದ ಮಾತ್ರ ಸಾಧ್ಯ. ರಾಗ, ದ್ವೇಷ ಮತ್ತು ವೈಮನಸ್ಯದಿಂದ ಎಂದಿಗೂ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಈ ಉದ್ಗಾರಗಳನ್ನು ತೆಗೆದರು.
ಅಣುಬಾಂಬ್ಗಿಂತಲೂ ‘ಆತ್ಮಬಲ’ ದೊಡ್ಡದು !
ಭಾರತ ದೇಶವು ಅಣುಬಾಂಬ್ಗಳ ಬಲದ ಮೇಲೆ ನಿಂತಿಲ್ಲ, ಬದಲಾಗಿ ಇಲ್ಲಿನ ಜನರ ಅಪಾರವಾದ ಆತ್ಮಬಲದ (ಆತ್ಮಸ್ಥೈರ್ಯದ) ಮೇಲೆ ನಿಂತಿದೆ. ಇದೇ ಕಾರಣಕ್ಕಾಗಿ ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇಂದಿಗೂ ಶಾಂತಿ ನೆಲೆಸಿದೆ. ಆತ್ಮಬಲದ ಮೂಲಕವೇ ಭಾರತವು ಇಂದು ಜಗತ್ತನ್ನು ಗೆದ್ದಿದೆ ಎಂದು ಮಹಾಸ್ವಾಮೀಜಿಯವರು ತಿಳಿಸಿದರು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !