
ಬೆಂಗಳೂರು – ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ನಗರ ಪೊಲೀಸರು ಬೃಹತ್ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯ ಅಡಿಯಲ್ಲಿ ೨೦೦ ಕ್ಕೂ ಹೆಚ್ಚು ನುಸುಳುಕೋರರನ್ನು ವಶಕ್ಕೆ ಪಡೆಯಲಾಗಿದೆ. (ಸರಕಾರೀ ವ್ಯವಸ್ಥೆಯ ವೈಫಲ್ಯ ! ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳನ್ನು ತಕ್ಷಣವೇ ಹಿಡಿದು ಅವರನ್ನು ಸಂಬಂಧಿತ ದೇಶಗಳಿಗೆ ಕಳುಹಿಸುವುದು ಒಂದು ನಿಯಮಿತ ಪ್ರಕ್ರಿಯೆಯಾಗಿದೆ. ಇದಕ್ಕಾಗಿ ವಿಶೇಷ ಕಾರ್ಯಾಚರಣೆಯ ದಾರಿಯನ್ನು ಯಾಕೆ ಕಾಯುತ್ತಿದ್ದಾರೆ? – ಸಂಪಾದಕರು) ಇವರಲ್ಲಿ ಬಾಂಗ್ಲಾದೇಶಿ ಪ್ರಜೆಗಳ ಸಂಖ್ಯೆ ೧೨೪ ಕ್ಕೂ ಹೆಚ್ಚು ಇರುವುದು ಬೆಳಕಿಗೆ ಬಂದಿದೆ.
🚨 124+ Bangladeshi infiltrators arrested in Bengaluru
This raises a serious question – is there any major city in India today without illegal Bangladeshi presence?
Those responsible for turning India into a safe haven for infiltrators must face strict action.
If 124 were… pic.twitter.com/FXKXrMVFqo
— Sanatan Prabhat (@SanatanPrabhat) March 7, 2026
೧. ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಯ (ಎಫ್.ಆರ್.ಆರ್.ಒ.) ಅಧಿಕಾರಿಗಳ ಸಹಯೋಗದೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ.
೨. ತಪಾಸಣೆಯ ವೇಳೆ ಅನೇಕರ ಬಳಿ ನಕಲಿ ಆಧಾರ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಸ್ಥಳೀಯ ವಿಳಾಸವಿರುವ ನಿವಾಸಿ ದಾಖಲೆಗಳು ಪತ್ತೆಯಾಗಿವೆ.
೩. ಈ ಜನರು ಸ್ಥಳೀಯರೆಂದು ನಟಿಸಿ ನಗರದ ವಿವಿಧ ಭಾಗಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನ ವರ್ತೂರು, ಕಾಡುಗೋಡಿ ಸೇರಿದಂತೆ ಪೂರ್ವ ವಿಭಾಗದ ವಿವಿಧೆಡೆ ಈ ದಾಳಿಗಳನ್ನು ನಡೆಸಲಾಗಿದೆ. ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!