ಹಿಂದೂತ್ವವಾದಿಗಳ ಸಂಘಟಿತ ವಿರೋಧಕ್ಕೆ ಸಿಕ್ಕ ಜಯ

ಬೆಂಗಳೂರು – ಮಾರ್ಚ್ 8 ರಂದು ಬೆಂಗಳೂರಿನ ಕೋರಮಂಗಲದ ‘ಮಿನಿಸ್ಟ್ರಿ ಆಫ್ ಕಾಮಿಡಿ’ ಸಭಾಂಗಣದಲ್ಲಿ ನಾಸಿಫ್ ಅಖ್ತರ್ ಅವರ ‘ಕಾಮಿಡಿ ಶೋ’ (ಹಾಸ್ಯ ಕಾರ್ಯಕ್ರಮ) ನಡೆಯಬೇಕಿತ್ತು. ಈತನು ಈ ಹಿಂದೆ ನಡೆದ ತನ್ನ ಕಾರ್ಯಕ್ರಮಗಳಲ್ಲಿ ಭಾರತ, ಹಿಂದೂ ಧರ್ಮ, ಪ್ರಭು ಶ್ರೀರಾಮಚಂದ್ರ ಮತ್ತು ಹಿಂದೂ ರಾಷ್ಟ್ರದ ಬಗ್ಗೆ ಅವಮಾನಕಾರಿ ಹಾಸ್ಯ ಮಾಡಿದ್ದನು.

ಸ್ಥಳೀಯ ಹಿಂದೂತ್ವವಾದಿಗಳ ಗಮನಕ್ಕೆ ಇದು ಬಂದ ತಕ್ಷಣ ಅವರು ಈ ಕಾರ್ಯಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ ಅವರು ಪೊಲೀಸ್ ಆಯುಕ್ತರಿಗೆ ಇ-ಮೇಲ್ ಮೂಲಕ ವಿನಂತಿ ಪತ್ರ ಸಲ್ಲಿಸಿದರು. ಈ ಪತ್ರದಲ್ಲಿ ಶ್ರೀ. ಗೌಡ ಅವರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಈ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.
ಬೆಂಗಳೂರು ಕೋರಮಂಗಲದ ಪೊಲೀಸ್ ಅಧೀಕ್ಷಕರಿಗೆ ನೀಡಿದ ಮನವಿ
ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಕಾರ್ಯಕರ್ತರು ಕೋರಮಂಗಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಈ ಬಗ್ಗೆ ದೂರು ದಾಖಲಿಸಿದರು. ಪೊಲೀಸರ ಒತ್ತಡದ ನಂತರ ನಾಸಿಫ್ ಅಖ್ತರ್, ವಿಡಿಯೋ ಒಂದನ್ನು ಬಿಡುಗಡೆ ಮಾಡಿ, ಈ ‘ಕಾಮಿಡಿ ಶೋ’ ಅನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದನು.
ಸಂಪಾದಕೀಯ ನಿಲುವು
|
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ