ಹಿಂದೂತ್ವವಾದಿಗಳ ಸಂಘಟಿತ ವಿರೋಧಕ್ಕೆ ಸಿಕ್ಕ ಜಯ

ಬೆಂಗಳೂರು – ಮಾರ್ಚ್ 8 ರಂದು ಬೆಂಗಳೂರಿನ ಕೋರಮಂಗಲದ ‘ಮಿನಿಸ್ಟ್ರಿ ಆಫ್ ಕಾಮಿಡಿ’ ಸಭಾಂಗಣದಲ್ಲಿ ನಾಸಿಫ್ ಅಖ್ತರ್ ಅವರ ‘ಕಾಮಿಡಿ ಶೋ’ (ಹಾಸ್ಯ ಕಾರ್ಯಕ್ರಮ) ನಡೆಯಬೇಕಿತ್ತು. ಈತನು ಈ ಹಿಂದೆ ನಡೆದ ತನ್ನ ಕಾರ್ಯಕ್ರಮಗಳಲ್ಲಿ ಭಾರತ, ಹಿಂದೂ ಧರ್ಮ, ಪ್ರಭು ಶ್ರೀರಾಮಚಂದ್ರ ಮತ್ತು ಹಿಂದೂ ರಾಷ್ಟ್ರದ ಬಗ್ಗೆ ಅವಮಾನಕಾರಿ ಹಾಸ್ಯ ಮಾಡಿದ್ದನು.

ಸ್ಥಳೀಯ ಹಿಂದೂತ್ವವಾದಿಗಳ ಗಮನಕ್ಕೆ ಇದು ಬಂದ ತಕ್ಷಣ ಅವರು ಈ ಕಾರ್ಯಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ ಅವರು ಪೊಲೀಸ್ ಆಯುಕ್ತರಿಗೆ ಇ-ಮೇಲ್ ಮೂಲಕ ವಿನಂತಿ ಪತ್ರ ಸಲ್ಲಿಸಿದರು. ಈ ಪತ್ರದಲ್ಲಿ ಶ್ರೀ. ಗೌಡ ಅವರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಈ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.
ಬೆಂಗಳೂರು ಕೋರಮಂಗಲದ ಪೊಲೀಸ್ ಅಧೀಕ್ಷಕರಿಗೆ ನೀಡಿದ ಮನವಿ
ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಕಾರ್ಯಕರ್ತರು ಕೋರಮಂಗಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಈ ಬಗ್ಗೆ ದೂರು ದಾಖಲಿಸಿದರು. ಪೊಲೀಸರ ಒತ್ತಡದ ನಂತರ ನಾಸಿಫ್ ಅಖ್ತರ್, ವಿಡಿಯೋ ಒಂದನ್ನು ಬಿಡುಗಡೆ ಮಾಡಿ, ಈ ‘ಕಾಮಿಡಿ ಶೋ’ ಅನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದನು.
ಸಂಪಾದಕೀಯ ನಿಲುವು
|
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !