|

ಬಳ್ಳಾರಿ – ಇಲ್ಲಿನ ಗುರುಕುಲ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಡೆಸಿದ ಅಮಾನವೀಯ ಹಲ್ಲೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ೮ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ದಾಳಿ ನಡೆಸಿದ ವಿದ್ಯಾರ್ಥಿ ತಲೆಮರೆಸಿಕೊಂಡಿದ್ದಾನೆ. ಈ ಘಟನೆಯಿಂದ ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಲೇ ತಮ್ಮ ಮಗ ಮೃತಪಟ್ಟಿದ್ದಾನೆ ಎಂದು ಆರೋಪಿಸುತ್ತಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

೧. ಕೆಲವು ದಿನಗಳ ಹಿಂದೆ ರಾತ್ರಿ ಊಟದ ನಂತರ ಎಲ್ಲರೂ ಮಲಗಿದ್ದಾಗ, ವಿದ್ಯಾರ್ಥಿಯೊಬ್ಬ ಮಂಚದ ಕಬ್ಬಿಣದ ರಾಡ್ ತೆಗೆದುಕೊಂಡು ೮ ವಿದ್ಯಾರ್ಥಿಗಳ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ. ಇದರಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಾಲಕ ಕಳೆದ ೪ ವರ್ಷಗಳಿಂದ ಈ ವಸತಿ ಶಾಲೆಯಲ್ಲಿ ಕಲಿಯುತ್ತಿದ್ದನು. ಆತ ಮೂಲತಃ ಆಂಧ್ರಪ್ರದೇಶದ ಆದೋನಿ ಗ್ರಾಮದವನಾಗಿದ್ದನು.
೨. ದಾಳಿ ಮಾಡಿದ ಹುಡುಗ ಇಷ್ಟೊಂದು ಜನರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದರೆ, ಇದರ ಹಿಂದೆ ಮಾದಕ ವಸ್ತು ಸೇವನೆಯೇ ಏಕೈಕ ಕಾರಣವಾಗಿರಬಹುದು ಎಂದು ಮೃತ ಬಾಲಕನ ತಂದೆ ಆರೋಪಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!