|

ಬಿಲಾಸಪುರ (ಹಿಮಾಚಲ ಪ್ರದೇಶ) – ಇಲ್ಲಿನ ತಲಾಯಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 5 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಮುಸಲ್ಮಾನ ಹುಡುಗನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಾರ್ಚ್ 6 ರಂದು ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಅಪ್ರಾಪ್ತ ಮುಸಲ್ಮಾನ ಹುಡುಗನನ್ನು ವಶಕ್ಕೆ ಪಡೆಯಲಾಗಿದ್ದು, ಬಾಲನ್ಯಾಯ ಮಂಡಳಿಯ ಆದೇಶದಂತೆ ಶಿಮ್ಲಾದ ಹೀರಾನಗರ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.
1. ಬಾಲಕಿಯ ಮೇಲಾದ ದೌರ್ಜನ್ಯದ ಸುದ್ದಿಯಿಂದ ಇಡೀ ಪ್ರದೇಶದಲ್ಲಿ ಆಕ್ರೋಶದ ಅಲೆ ಎದ್ದಿದೆ. ಮಾರ್ಚ್ 8 ರಂದು ಈ ಭಾಗದ ಸುಮಾರು 200 ಜನರು ಸಂತ್ರಸ್ತೆಯ ಮನೆಗೆ ತಲುಪಿದ್ದರು. ಪ್ರತಿಭಟನಾಕಾರರಲ್ಲಿ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು, ಬಿಜೆಪಿ ಮಂಡಲ ಅಧ್ಯಕ್ಷರು, ಬಿಜೆಪಿ ಯುವ ಕಾರ್ಯಕರ್ತರು, ಬಜರಂಗದಳದ ಕಾರ್ಯಕರ್ತರು, ವ್ಯಾಪಾರ ಮಂಡಳಿಯ ಪ್ರತಿನಿಧಿಗಳು ಮತ್ತು ಭಡೋಲಿಯಾ, ಬಕೈನ್ ಮತ್ತು ಕಲೋಲ್ನ ಮಹಿಳೆಯರು ಸೇರಿದ್ದರು. ಆಕ್ರೋಶಗೊಂಡ ಗುಂಪು ಭಡೋಲಿ ಕಲಾ ಎಂಬಲ್ಲಿನ ಧಾರ್ಮಿಕ ಸ್ಥಳಕ್ಕೆ ನುಗ್ಗಿ ಧ್ವಂಸಗೊಳಿಸಿದ್ದರಿಂದ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
2. ಆರೋಪಿಯ ಮನೆ ಸೇರಿದಂತೆ ಜಿಲ್ಲೆಯ ಧಾರ್ಮಿಕ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಂತ್ರಸ್ತ ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಕುಟುಂಬದ ದೂರಿನ ಮೇರೆಗೆ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
3. ಹಿಂದೂ ರಕ್ಷಣಾ ಮಂಚ್ನ ಕಮಲ್ ಗೌತಮ್ ಅವರು ಕಾರ್ಯಕರ್ತರೊಂದಿಗೆ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದರು. ಈ ಪ್ರಕರಣದಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವು“ಅಪ್ರಾಪ್ತ ಮುಸಲ್ಮಾನ ಹುಡುಗನು ಹಿಂದೂ ಹುಡುಗಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸುತ್ತಾನೆ ಎಂದರೆ, ಅವನಿಗೆ ಬಾಲ್ಯದಿಂದಲೇ ಹಿಂದೂ ದ್ವೇಷ ಮತ್ತು ಲವ್ ಜಿಹಾದ್ನ ಪಾಠಗಳನ್ನು ಕಲಿಸಲಾಗಿದೆ ಎಂದು ಯಾರಾದರೂ ಹೇಳಿದರೆ ಅದರಲ್ಲಿ ತಪ್ಪೇನಿದೆ?” |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!