
ಕೊಮಿಲ್ಲಾ (ಬಾಂಗ್ಲಾದೇಶ) – ಇಲ್ಲಿನ ಕಲಾಗಾಛಿತ್ಲಾ ದೇವಾಲಯ ಮತ್ತು ಅದರ ಸಮೀಪದ ರಸ್ತೆಯಲ್ಲಿ ಮಾರ್ಚ್ 7 ರಂದು ಸರಣಿ ಪೆಟ್ರೋಲ್ ಬಾಂಬ್ ಸ್ಫೋಟಗಳು ಸಂಭವಿಸಿವೆ. ಈ ಸ್ಫೋಟಗಳಲ್ಲಿ ಮೂವರು ಗಾಯಗೊಂಡಿದ್ದು, ಅವರಲ್ಲಿ ದೇವಾಲಯದ ಅರ್ಚಕ ಕೇಶವ ಚಕ್ರವರ್ತಿ ಮತ್ತು ಸ್ಥಳೀಯ ನಿವಾಸಿ ಅಬ್ದುಲ್ ಬಾರೆಕ್ ಸೇರಿದ್ದಾರೆ. ಮೂರನೇ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ.
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಸಂಜೆ 6:28 ರ ಸುಮಾರಿಗೆ ಬುರ್ಖಾ ಧರಿಸಿದ ವ್ಯಕ್ತಿಯೊಬ್ಬರು ದೇವಾಲಯದ ಆವರಣ ಪ್ರವೇಶಿಸಿ ಬ್ಯಾಗ್ ಇಟ್ಟು ಓಡಿಹೋಗಿದ್ದಾರೆ. ಅದರ ಬೆನ್ನಲ್ಲೇ ಸ್ಫೋಟ ಸಂಭವಿಸಿದೆ.
ದೋಷಿಗಳನ್ನು ಆದಷ್ಟು ಬೇಗ ಬಂಧಿಸಲು ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಕೊಮಿಲ್ಲಾ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಆಕ್ರಮಣಕಾರರು ಪರಾರಿಯಾಗುವಾಗ ಹತ್ತಿರದಲ್ಲಿದ್ದ ಬೌದ್ಧ ಮಂದಿರದ ಮೇಲೆಯೂ ನಾಡಬಾಂಬ್ ಎಸೆದಿದ್ದಾರೆ.
“ಧಾರ್ಮಿಕ ಸೌಹಾರ್ದತೆಯನ್ನು ಹಾಳುಮಾಡುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ” ಎಂದು ಹಿಂದೂ-ಬೌದ್ಧ-ಕ್ರಿಶ್ಚಿಯನ್ ಏಕತಾ ಪರಿಷತ್ತಿನ ಕೊಮಿಲ್ಲಾ ಶಾಖೆಯ ಪ್ರಧಾನ ಕಾರ್ಯದರ್ಶಿ ತಪಸ್ ಬಕ್ಷಿ ಹೇಳಿದ್ದಾರೆ. ಈ ಪ್ರದೇಶದಲ್ಲಿ ಒಂದು ಬೌದ್ಧ ಮಂದಿರ, ಎರಡು ಹಿಂದೂ ದೇವಾಲಯಗಳು ಮತ್ತು ಒಂದು ಮಸೀದಿ ಇದೆ. (ಸ್ಫೋಟ ನಡೆಸಿದವರು ಮಸೀದಿಯನ್ನು ಬಿಟ್ಟು ಹಿಂದೂ ಮತ್ತು ಬೌದ್ಧ ಮಂದಿರಗಳನ್ನೇ ಗುರಿಯಾಗಿಸಿಕೊಂಡಿರುವುದು ದಾಳಿಕೋರರು ಯಾರೆಂಬುದನ್ನು ಸ್ಪಷ್ಟಪಡಿಸುತ್ತದೆ! – ಸಂಪಾದಕರು)
ಪೊಲೀಸರು ಘಟನಾ ಸ್ಥಳದಿಂದ ಕೊಡಲಿ, ಬ್ಯಾಗ್ ಸೇರಿದಂತೆ ಕೆಲವು ಪುರಾವೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಹಿಂದೂ ದೇವಾಲಯಗಳು ಅಸುರಕ್ಷಿತ! |
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !