|

ಮೈಸೂರು – ದೇವರ ದೃಷ್ಟಿಯಲ್ಲಿ ಜಾತಿ ಅಥವಾ ಧರ್ಮ ಎಂಬ ಭೇದವಿರುವುದಿಲ್ಲ. ಅದನ್ನು ಮಾನವನೇ ನಿರ್ಮಿಸಿದ್ದಾನೆ. ಇಂದು ಮನುಷ್ಯ ಮನುಷ್ಯನನ್ನು ದ್ವೇಷಿಸಲು ಶುರು ಮಾಡಿದ್ದಾನೆ, ಈ ಪರಿಸ್ಥಿತಿ ಬದಲಾಗಿ ಎಲ್ಲರೂ ಪರಸ್ಪರ ಪ್ರೀತಿಸಬೇಕು ಮತ್ತು ಸುಖ-ಶಾಂತಿಯಿಂದ ಬದುಕಬೇಕು. ಅಂತಹ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದರು. (ಅಂತಹ ವ್ಯವಸ್ಥೆಯನ್ನು ನಿರ್ಮಿಸದಂತೆ ಸಿದ್ದರಾಮಯ್ಯ ಅವರನ್ನು ತಡೆದವರು ಯಾರು? ದೇಶದಲ್ಲಿ ಮತ್ತು ಅನೇಕ ರಾಜ್ಯಗಳಲ್ಲಿ ಸುದೀರ್ಘ ಕಾಲ ಕಾಂಗ್ರೆಸ್ ಆಡಳಿತದಲ್ಲಿದ್ದರೂ ಇಂತಹ ವ್ಯವಸ್ಥೆಯನ್ನು ಯಾಕೆ ನಿರ್ಮಿಸಲಿಲ್ಲ? ಕಾಂಗ್ರೆಸ್ ಪಕ್ಷವೇ ಜಿಹಾದಿ ಭಯೋತ್ಪಾದಕರನ್ನು ಮತ್ತು ಜಿಹಾದಿ ಮುಸ್ಲಿಮರನ್ನು ಯಾವಾಗಲೂ ಬೆಂಬಲಿಸುತ್ತಾ ಬಂದಿದ್ದರಿಂದ ಹಿಂದೂಗಳು ಎಂದಿಗೂ ಸುಖ-ಶಾಂತಿಯಿಂದ ಇರಲು ಸಾಧ್ಯವಾಗಲಿಲ್ಲ, ಈ ಬಗ್ಗೆ ಅವರು ಯಾಕೆ ಮಾತನಾಡುವುದಿಲ್ಲ? – ಸಂಪಾದಕರು) ಇಲ್ಲಿನ ಶಿರಮಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ನಿರ್ಮಿಸಿದ ಲಕ್ಷ್ಮೀದೇವಿ ದೇವಸ್ಥಾನದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಸಿದ್ದರಾಮಯ್ಯ ಅವರು ಮಾತು ಮುಂದುವರೆಸಿ, ದೇವರು ಕೇವಲ ದೇವಸ್ಥಾನಕ್ಕೆ ಸೀಮಿತವಾಗಿಲ್ಲ. ಎಲ್ಲೆಡೆ ಇರುವ ದೇವರ ಮೇಲೆ ನನಗೆ ನಂಬಿಕೆಯಿದೆ. ಪ್ರತಿಯೊಂದು ಕೆಲಸವನ್ನು ಪ್ರಾರಂಭಿಸುವಾಗ ನಾನು ದೇವರನ್ನು ಸ್ಮರಿಸುತ್ತೇನೆ ಮತ್ತು ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು. (ಹಿಂದೂಗಳು ಎಲ್ಲರಿಗೂ ಒಳ್ಳೆಯದಾಗಲಿ ಎಂದೇ ಪ್ರಾರ್ಥಿಸುತ್ತಾರೆ; ಆದರೆ ಕೆಲವು ಸಮುದಾಯಗಳು ‘ನಮ್ಮ ದೇವರೇ ಶ್ರೇಷ್ಠ, ಬೇರೆ ಯಾರೂ ಇಲ್ಲ’ ಎಂದು ಹೇಳುತ್ತಾರೆ ಮತ್ತು ಅವರ ಧಾರ್ಮಿಕ ಸ್ಥಳಗಳಿಂದ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ದಾಳಿ ಮಾಡುತ್ತಾರೆ, ಈ ಬಗ್ಗೆ ಸಿದ್ದರಾಮಯ್ಯ ಅವರು ಯಾವಾಗ ಮಾತನಾಡುತ್ತಾರೆ? – ಸಂಪಾದಕರು)
ಸಂಪಾದಕೀಯ ನಿಲುವು
|
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !