ಶನಿದೇವರ ಪೂಜೆಯ ವೇಳೆ ದೇವಸ್ಥಾನದಲ್ಲಿ ಸ್ಫೋಟ

ಢಾಕಾ – ಬಾಂಗ್ಲಾದೇಶದ ಬೋಗುರಾ ಮತ್ತು ಕಾಕ್ಸ್ ಬಜಾರ್ ನಲ್ಲಿ ಮಾರ್ಚ್ 6 ಮತ್ತು 7 ರಂದು ನಡೆದ ಘಟನೆಗಳಲ್ಲಿ ಇಬ್ಬರು ಹಿಂದೂಗಳನ್ನು ಹತ್ಯೆ ಮಾಡಲಾಗಿದೆ ಎಂದು ‘ಬಾಂಗ್ಲಾದೇಶ ಜಾತೀಯ ಹಿಂದೂ ಮಹಾಸಂಘ’ ಸಂಘಟನೆ ಮಾಹಿತಿ ನೀಡಿದೆ. ‘ಬಾಂಗ್ಲಾದೇಶ ಜಾತೀಯ ಹಿಂದೂ ಮಹಾಸಂಘ’ದ ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ ಕುಮಾರ ರಾಯ್ ಅವರು ಈ ಬಗ್ಗೆ ಮಾತನಾಡಿ, ಮಾರ್ಚ್ 6 ರಂದು ಬೋಗುರಾ ಜಿಲ್ಲೆಯ ಸಾರಿಯಾಕಾಂದಿಯಲ್ಲಿ ಭೂವಿವಾದದ ಹಿನ್ನೆಲೆಯಲ್ಲಿ ಚಾಯೋನ ರಾಜಭರ್ (40 ವರ್ಷ) ಎಂಬ ಹಿಂದೂ ವ್ಯಕ್ತಿಯನ್ನು ಕೆಲವು ಮತಾಂಧ ಗೂಂಡಾಗಳು ಚಾಕುವಿನಿಂದ ಇರಿದು ಕೊಲೆ ಮಾಡಿದರು. ಮೃತ ಚಾಯೋನ್ ರಾಜಭರ್ ಅವರು ‘ದ ನ್ಯೂ ಕಾಂಟೆಸ್ಟ್’ ಎಂಬ ಸ್ಥಳೀಯ ತರಬೇತಿ ಕೇಂದ್ರದ ನಿರ್ದೇಶಕರಾಗಿದ್ದರು. ಹಾಗೆಯೇ ಮಾರ್ಚ್ 7 ರಂದು ಕಾಕ್ಸ್ ಬಜಾರ್ ನಗರದಲ್ಲಿ ಗಣೇಶ ಪಾಲ್ (29 ವರ್ಷ) ಎಂಬ ಹಿಂದೂ ಯುವಕನನ್ನು ಸುಲಿಗೆ ಹಣ ನೀಡಲು ನಿರಾಕರಿಸಿದ್ದಕ್ಕಾಗಿ ಜಿಹಾದಿಗಳು ಇರಿದು ಕೊಲೆ ಮಾಡಿದರು. ಮತ್ತೊಂದು ಘಟನೆಯಲ್ಲಿ, ಇಲ್ಲಿನ ಶ್ರೀ ಶನಿದೇವರ ದೇವಸ್ಥಾನದಲ್ಲಿ ಪೂಜೆಯ ವೇಳೆ ಸ್ಫೋಟ ನಡೆಸಲಾಗಿದೆ. (ಬಾಂಗ್ಲಾದೇಶದಲ್ಲಿ ಇತ್ತೀಚೆಗಷ್ಟೇ ತಾರಿಕ್ ರೆಹಮಾನ್ ನೇತೃತ್ವದಲ್ಲಿ ‘ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ’ಯ ಸರಕಾರ ಅಸ್ತಿತ್ವಕ್ಕೆ ಬಂದಿದೆ; ಆದರೂ ಹಿಂದೂಗಳ ಹತ್ಯೆಗಳು ಮುಂದುವರಿಯುತ್ತಲೇ ಇವೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆಗಳು ರಾಜಕೀಯ ಸ್ವರೂಪದ್ದು ಎಂದು ಹೇಳಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಆಡಳಿತಗಾರರ ಬಣ್ಣ ಬಯಲಾಗಿದೆ! ಇವೆಲ್ಲವೂ ಹಿಂದೂಗಳ ವಂಶಹತ್ಯೆಯ ಒಂದು ಭಾಗವಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ! – ಸಂಪಾದಕರು)
ಈ ಹಿಂದೆ ಚಟ್ಟೋಗ್ರಾಮ್ ನಗರದ ಅಲಂಕಾರ ಪ್ರದೇಶದಲ್ಲಿ ಕಾರ್ಮಿಕರಿಂದ ಸುಲಿಗೆ ಮಾಡುವುದನ್ನು ವಿರೋಧಿಸಿದ್ದಕ್ಕಾಗಿ ಆಕಾಶ ದಾಸ್ ಎಂಬ ಹಿಂದೂ ಯುವಕನನ್ನು ಹತ್ಯೆ ಮಾಡಲಾಗಿತ್ತು. ಅದೇ ಜಿಲ್ಲೆಯ ಚಂದನೈಶ್ ಉಪಜಿಲ್ಲೆಯ ಬದೂರಪಾರಾ ಪ್ರದೇಶದಲ್ಲಿ ಜಾನುವಾರುಗಳ ಕಳ್ಳತನ ತಡೆಯಲು ಪ್ರಯತ್ನಿಸಿದ ಚಂದನ್ ಡೇ ಎಂಬ ಹಿಂದೂ ವ್ಯಕ್ತಿಯನ್ನು ಮತಾಂಧ ಮುಸ್ಲಿಮರು ಗುಂಡಿಕ್ಕಿ ಕೊಂದಿದ್ದರು ಎಂದು ಈ ಸಂಘಟನೆ ಮಾಹಿತಿ ನೀಡಿದೆ.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !