ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ
(ಮೌಲಾನಾ ಎಂದರೆ ಇಸ್ಲಾಂ ಧರ್ಮದ ಅಧ್ಯಯನಕಾರ)

ಲಕ್ಷಣ ಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ತಾಯಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಹಾರದ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 84 ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.
🚨 Legal Action Against Maulana Abdullah Salim
Bihar’s Maulana Abdullah Salim faces legal action in Uttar Pradesh after making derogatory remarks about CM Yogi Adityanath’s mother.
⚖️ Reports say cases have been registered in 80+ police stations across the state.
The accused… pic.twitter.com/1KYwRZLACO
— Sanatan Prabhat (@SanatanPrabhat) March 10, 2026
ಕೆಲವು ದಿನಗಳ ಹಿಂದೆ ಮೌಲಾನಾ ಅವರ ವಿಡಿಯೋವೊಂದು ಮುನ್ನೆಲೆಗೆ ಬಂದಿತ್ತು. ‘ಒಂದು ವೇಳೆ ಯಾರ ಬಳಿಯಾದರೂ ಯೋಗಿ ಆದಿತ್ಯನಾಥ ಅವರ ತಾಯಿಯ 250 ಗ್ರಾಂ ಮಾಂಸ ಪತ್ತೆಯಾದರೂ, ಅವರಿಗೆ ಮೊಣಕಾಲಿನ ಕೆಳಗೆ ಗುಂಡು ಹಾರಿಸಿ ಗಾಯಗೊಳಿಸುವ ಆದೇಶವಿದೆ. ಆದರೆ ರಾಜ್ಯದಲ್ಲಿ ಯಾವುದೇ ಅತ್ಯಾಚಾರಿಗಳಿಗೆ ಯಾವುದೇ ಶಿಕ್ಷೆ ನೀಡಲಾಗುತ್ತಿಲ್ಲ!’ ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ದೊಡ್ಡ ವಿವಾದ ಉಂಟಾಗಿದೆ. ಈ ಹೇಳಿಕೆಯ ವಿರುದ್ಧ ಇನ್ನೂ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ‘ಮೌಲಾನಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಆಂದೋಲನವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು’ ಎಂದು ಪ್ರತಿಭಟನಾಕಾರರು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ.
ಯಾರು ಈ ಮೌಲಾನಾ ಅಬ್ದುಲ್ಲಾ ಸಲೀಂ?
ಬಿಹಾರದ ಮೌಲಾನಾ ಅಬ್ದುಲ್ಲಾ ಸಲೀಂ ಅವರು ಈ ಹಿಂದೆ ಓವೈಸಿ ಅವರ ‘ಎಐಎಂಐಎಂ’ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಂದರೆ ಅಖಿಲ ಭಾರತ ಮುಸ್ಲಿಂ ಏಕತಾ ಸಂಘ) ಪಕ್ಷದೊಂದಿಗೆ ಸಂಬಂಧ ಹೊಂದಿದ್ದರು. 2025ರ ಬಿಹಾರ ಚುನಾವಣೆಯಲ್ಲಿ ಅವರಿಗೆ ಜೋಕಿಹತ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಸಿಗದ ಕಾರಣ ಸಲೀಂ ಅವರು ಪಕ್ಷದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದರು. ನಂತರ ಪ್ರಶಾಂತ ಕಿಶೋರ ಅವರ ‘ಜನ ಸುರಾಜ ಪಕ್ಷ’ ಸೇರಿದ್ದರು; ಆದರೆ ಚುನಾವಣೆಯ ಸಮಯದಲ್ಲಿ ಚುನಾವಣಾ ಆಯೋಗವು ಸಲೀಂ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ