ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕ ಸ್ಥಗಿತ

ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ

(ಎಲ್‌ಪಿಜಿ ಎಂದರೆ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ – ದ್ರವೀಕೃತ ಪೆಟ್ರೋಲಿಯಂ ಅನಿಲ)

ಬೆಂಗಳೂರು – ಕೊಲ್ಲಿ ರಾಷ್ಟ್ರಗಳಲ್ಲಿನ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ ಉಂಟಾಗಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಪ್ರಸಿದ್ಧ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಅನ್ನಪ್ರಸಾದ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ಭಕ್ತರಿಗಾಗಿ ಅನ್ನಪ್ರಸಾದ ತಯಾರಿಸಲು ನಿತ್ಯವೂ 5 ರಿಂದ 6 ವಾಣಿಜ್ಯ ಸಿಲಿಂಡರ್‌ಗಳ ಅವಶ್ಯಕತೆಯಿರುತ್ತದೆ. ಪ್ರಸ್ತುತ ದೇವಸ್ಥಾನದಲ್ಲಿ ಕೇವಲ 4 ಸಿಲಿಂಡರ್‌ಗಳು ಮಾತ್ರ ಲಭ್ಯವಿದ್ದು, ಅವು ಇಂದಿನ ಅಡುಗೆಗೆ ಸಾಕಾಗುವುದಿಲ್ಲ. ಗ್ಯಾಸ್ ಪೂರೈಕೆಯಾಗದ ಕಾರಣ ಅನಿವಾರ್ಯವಾಗಿ ಪ್ರಸಾದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಸಂಪಾದಕೀಯ ನಿಲುವು

ಮನೆಗಳು ಮತ್ತು ವಾಹನಗಳಿಗೆ ಆದ್ಯತೆ ನೀಡುವಾಗ, ಅನ್ನದಾಸೋಹ ಕೇಂದ್ರಗಳು, ದೇವಸ್ಥಾನಗಳು, ಆಶ್ರಮಗಳು ಮತ್ತು ಧರ್ಮಶಾಲೆಗಳಿಗೆ ಸಿಗುವ ಎಲ್‌ಪಿಜಿ ಸಿಲಿಂಡರ್‌ಗಳನ್ನೂ ಆದ್ಯತೆಯ ಪಟ್ಟಿಗೆ ಸೇರಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ!