
ಕಾಬೂಲ್ (ಅಫ್ಘಾನಿಸ್ತಾನ) – ಪಾಕಿಸ್ತಾನವು ಮಾರ್ಚ್ 12 ರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ತಾಲಿಬಾನ್ ಸರ್ಕಾರದ ವಕ್ತಾರರು ನೀಡಿದ ಮಾಹಿತಿಯ ಪ್ರಕಾರ, ಪಾಕಿಸ್ತಾನವು ಕಂದಹಾರ್ ವಿಮಾನ ನಿಲ್ದಾಣದ ಸಮೀಪವಿರುವ ಖಾಸಗಿ ವಿಮಾನಯಾನ ಸಂಸ್ಥೆಯ ತೈಲ ಸಂಗ್ರಹಾಗಾರದ ಮೇಲೆ ಬಾಂಬ್ ದಾಳಿ ನಡೆಸಿದೆ. ಈ ದಾಳಿಗೆ ಅಫ್ಘಾನಿಸ್ತಾನವು ಬಲವಾದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.
ಪಾಕಿಸ್ತಾನವು ‘ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್’ (TTP) ಸಂಘಟನೆಗೆ ಸೇರಿದ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿರುವುದಾಗಿ ಪ್ರತಿಪಾದಿಸಿದೆ. ಪಾಕಿಸ್ತಾನಿ ಸೇನೆಯು ಈ ಸಂಘಟನೆಯ ನೆಲೆಯನ್ನು ನಿಖರವಾಗಿ ಗುರಿಯಾಗಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಟಿಟಿಪಿಗೆ ಸಹಾಯ ಮಾಡುತ್ತಿರುವ ಆರೋಪವನ್ನು ತಿರಸ್ಕರಿಸಿದ ಅಫ್ಘಾನಿಸ್ತಾನ
ಟಿಟಿಪಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಆರೋಪವನ್ನು ಅಫ್ಘಾನಿಸ್ತಾನದ ಮೇಲೆ ಹೊರಿಸಲಾಗುತ್ತಿದೆ. ಪಾಕಿಸ್ತಾನದಲ್ಲಿ ನಡೆದ ದಾಳಿಗಳಿಗೆ ಇವರನ್ನೇ ಹೊಣೆಗಾರರನ್ನಾಗಿ ಮಾಡಲಾಗಿತ್ತು. ಆದರೆ, ಅಫ್ಘಾನಿಸ್ತಾನವು ಈ ಆರೋಪಗಳನ್ನು ತಿರಸ್ಕರಿಸಿದೆ. “ಅಫ್ಘಾನಿಸ್ತಾನದ ಭೂಮಿಯನ್ನು ಮತ್ತೊಂದು ದೇಶದ ಮೇಲೆ ದಾಳಿ ಮಾಡಲು ಬಳಸಲು ಬಿಡುವುದಿಲ್ಲ” ಎಂಬ ನಿಲುವನ್ನು ತಾಲಿಬಾನ್ ಸರ್ಕಾರ ಮಂಡಿಸಿದೆ.
ಪಾಕಿಸ್ತಾನದ ಮೇಲೆ ಅಫ್ಘಾನಿಸ್ತಾನದ ಪ್ರತಿದಾಳಿ
ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯವು, ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಮಾರ್ಚ್ 12 ರಂದು ಅಫ್ಘಾನ್ ವಾಯುಪಡೆಯು ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ತಿಳಿಸಿದೆ. ಈ ವೇಳೆ ಕೊಹಾಟ್ ಪ್ರದೇಶದ ಪಾಕಿಸ್ತಾನಿ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಳ್ಳಲಾಗಿತ್ತು. ಈ ದಾಳಿಯಲ್ಲಿ ಉಂಟಾದ ಸಾವು-ನೋವುಗಳ ಬಗ್ಗೆ ಇನ್ನು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!