
ಮುಂಬಯಿ, ಮಾರ್ಚ್ 13 (ವಾರ್ತೆ): ಆಮಿಷ, ವಂಚನೆ ಮತ್ತು ಪ್ರಲೋಭನೆಗಳ ಮೂಲಕ ನಡೆಯುವ ಮತಾಂತರವನ್ನು ತಡೆಗಟ್ಟಲು ‘ಮಹಾರಾಷ್ಟ್ರ ಧರ್ಮ ಸ್ವಾತಂತ್ರ್ಯ ಅಧಿನಿಯಮ 2026’ ವಿಧೇಯಕವನ್ನು ಮಾರ್ಚ್ 13 ರಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಗೃಹ ರಾಜ್ಯ ಸಚಿವ (ಗ್ರಾಮೀಣ) ಡಾ. ಪಂಕಜ್ ಭೋಯರ್ ಅವರು ಈ ವಿಧೇಯಕವನ್ನು ಸದನದಲ್ಲಿ ಮಂಡಿಸಿದರು. ‘ವಂಚನೆಯ ಮೂಲಕ ನಡೆಯುವ ಮತಾಂತರವನ್ನು ತಡೆಯಲು ಮಹಾರಾಷ್ಟ್ರದಲ್ಲಿ ಸಮರ್ಥ ಕಾನೂನನ್ನು ಜಾರಿಗೆ ತರಬೇಕು’ ಎಂದು ಕಳೆದ ಹಲವು ವರ್ಷಗಳಿಂದ ಹಿಂದುತ್ವನಿಷ್ಠ ಸಂಘಟನೆಗಳು ಸರಕಾರವನ್ನು ಒತ್ತಾಯಿಸುತ್ತಿದ್ದವು.
‘Maharashtra Freedom of Religion Bill 2026’ Introduced
A bill aimed at preventing religious conversions through allurement, fraud, and inducement has been introduced in the Maharashtra Assembly.
The proposed law includes strict provisions to curb fraudulent and forced religious… https://t.co/rSQ3PoxbSp pic.twitter.com/RpDQc2uDqU
— Sanatan Prabhat (@SanatanPrabhat) March 13, 2026
ಕಳೆದ ವಾರವಷ್ಟೇ ಈ ಕಾನೂನಿನ ಕರಡು ಪ್ರತಿಯನ್ನು ಸಚಿವ ಸಂಪುಟದ ಸಭೆಯಲ್ಲಿ ಅನುಮೋದಿಸಲಾಗಿತ್ತು. ಈ ವಿಧೇಯಕ ಈಗ ವಿಧಾನಸಭೆಯಲ್ಲಿ ಮಂಡನೆಯಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಈ ವಿಧೇಯಕದ ಬಗ್ಗೆ ಸದನದಲ್ಲಿ ಚರ್ಚೆ ನಡೆಯಲಿದೆ. ನಂತರ ಇದು ಕಾನೂನಾಗಿ ರೂಪಗೊಳ್ಳಲು ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಲಾಗುವುದು. ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡರಲ್ಲೂ ಸರಕಾರಕ್ಕೆ ಬಹುಮತ ಇರುವುದರಿಂದ, ಈ ವಿಧೇಯಕವು ಯಾವುದೇ ಅಡೆತಡೆಯಿಲ್ಲದೆ ಅಂಗೀಕಾರವಾಗಲಿದೆ ಎಂದು ಹೇಳಲಾಗುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!