ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶದ ಅಲೆ!

ಆಂಧ್ರ ಪ್ರದೇಶ – ರಾಜ್ಯದಲ್ಲಿ ಗೋವು ಕಳ್ಳಸಾಗಾಣಿಕೆ ವಿರುದ್ಧ ಕಠಿಣ ಕಾನೂನು ಜಾರಿಯಲ್ಲಿದ್ದರೂ, ‘ರಕ್ಷಕರೇ ಭಕ್ಷಕರಾಗುತ್ತಿದ್ದಾರೆ’ ಎಂಬ ಸಂಶಯವೊಂದು ಗೋವು ಕಳ್ಳಸಾಗಾಣಿಕೆಗೆ ಸಂಬಂಧಿಸಿದ ವಿಡಿಯೋದಿಂದಾಗಿ ಮೂಡಿದೆ. ಈ ವಿಡಿಯೋದಲ್ಲಿ ಪೊಲೀಸರು ಹಣ ಪಡೆದು ಹಸುಗಳ ಅಕ್ರಮ ಸಾಗಾಟ ಮಾಡುತ್ತಿದ್ದ ಟ್ರಕ್ ಅನ್ನು ಬಿಟ್ಟು ಕಳುಹಿಸುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. (ಪೊಲೀಸರಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ತರಬೇತಿ ನೀಡುವಾಗ ನೈತಿಕತೆಯನ್ನು ಕಲಿಸಿಲ್ಲ, ಅದರ ಪರಿಣಾಮವಿದು! – ಸಂಪಾದಕರು)
View this post on Instagram
ಈ ವಿಡಿಯೋದಲ್ಲಿ, ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸ್ ತಪಾಸಣೆಗಾಗಿ ನಿಲ್ಲಿಸಲಾಗಿತ್ತು. ಆದರೆ, ತಪಾಸಣೆ ನಡೆಸಿ ಕ್ರಮ ಕೈಗೊಳ್ಳುವ ಬದಲು, ಪೊಲೀಸರು ಟ್ರಕ್ನಲ್ಲಿದ್ದ ಗೋವು ಕಳ್ಳಸಾಗಾಣಿಕೆದಾರರಿಂದ ಹಣ ಪಡೆದು ಟ್ರಕ್ ಮುಂದೆ ಹೋಗಲು ಅನುಮತಿ ನೀಡಿದ್ದಾರೆ. ಜನರ ಕಣ್ಣು ತಪ್ಪಿಸಿ ಪೊಲೀಸರು ಲಂಚ ಪಡೆಯುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ‘ಕೇವಲ ಲಂಚ ನೀಡಿ, ಆಮೇಲೆ ಏನನ್ನಾದರೂ ಸಾಗಿಸಬಹುದು’ ಎಂಬಂತಾಗಿದೆ ಪೊಲೀಸರ ವರ್ತನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಪ್ರತಿಕ್ರಿಯಿಸಿದ್ದಾರೆ. ಹಿರಿಯ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಭ್ರಷ್ಟ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಸಂಪಾದಕೀಯ ನಿಲುವುಸರಕಾರವು ಇಂತಹ ಪೊಲೀಸರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ