|

ಮುಂಬಯಿ – ತ್ರ್ಯಂಬಕೇಶ್ವರ-ನಾಸಿಕ್ನಲ್ಲಿ ಸಿಂಹಸ್ಥ ಕುಂಭಮೇಳದ ಆಯೋಜನೆಯು 2027 ರಲ್ಲಿ ನಡೆಯಲಿದ್ದು, ಈ ಕುಂಭಮೇಳಕ್ಕೆ ದೇಶ-ವಿದೇಶಗಳಿಂದ ಕೋಟ್ಯಂತರ ಭಕ್ತರು ಬರಲಿದ್ದಾರೆ. ಇಲ್ಲಿಗೆ ಬರುವ ಪ್ರತಿಯೊಬ್ಬ ಭಕ್ತನು ಭಾರತದ, ಅದರಲ್ಲೂ ಮುಖ್ಯವಾಗಿ ಮಹಾರಾಷ್ಟ್ರದ ಪ್ರತಿಬಿಂಬವನ್ನು ತನ್ನೊಂದಿಗೆ ಕೊಂಡೊಯ್ಯುತ್ತಾನೆ. ಆದ್ದರಿಂದ ಯಶಸ್ವಿ ಆಯೋಜನೆಯ ಮೂಲಕ ಈ ಕುಂಭಮೇಳವು ಜಗತ್ತಿಗೆ ಆಕರ್ಷಣೀಯವಾಗಿರಬೇಕು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಿರ್ದೇಶನ ನೀಡಿದರು.

ಕುಂಭಮೇಳಕ್ಕಾಗಿ 22 ಸಾವಿರದ 181 ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಭವನದಲ್ಲಿ ನಡೆದ ‘ಕುಂಭಮೇಳ ಉನ್ನತ ಮಟ್ಟದ ಸಮಿತಿ’ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಕುಂಭಮೇಳದ ಕೆಲಸಗಳಲ್ಲಿ ಯಾರಾದರೂ ಕೆಟ್ಟ ಉದ್ದೇಶದಿಂದ ಅಥವಾ ಕೆಲಸ ವಿಳಂಬ ಮಾಡುವ ಉದ್ದೇಶದಿಂದ ಅಡ್ಡಿಪಡಿಸಿದರೆ, ಅಂತಹವರನ್ನು ಕ್ಷಮಿಸುವುದಿಲ್ಲ. ಅವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂಬ ಎಚ್ಚರಿಕೆಯನ್ನೂ ಮುಖ್ಯಮಂತ್ರಿಗಳು ನೀಡಿದರು.
ಮುಖ್ಯಮಂತ್ರಿಗಳು,
1. ಕುಂಭಮೇಳದ ಕೆಲಸಗಳಿಗೆ ಅಗತ್ಯವಿರುವ ಭೂಮಿಯ ಭೂಸ್ವಾಧೀನಕ್ಕೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕು.
2. ಸ್ವಚ್ಛತೆ ಬಹಳ ಮುಖ್ಯವಾಗಿದ್ದು, ಈ ಕಾಮಗಾರಿಗಳಲ್ಲಿ ನಿರ್ಮಿಸಲಾಗುವ ಶೌಚಾಲಯಗಳು ಗುಣಮಟ್ಟದಿಂದ ಕೂಡಿರಬೇಕು.
3. ನಾಸಿಕ್ಗೆ ಬರುವ ಭಕ್ತರು ಶಿರಡಿ ಮತ್ತು ಶನಿಶಿಂಗ್ಣಾಪುರಕ್ಕೂ ಭೇಟಿ ನೀಡುತ್ತಾರೆ. ಆದ್ದರಿಂದ ಶಿರಡಿ ಮತ್ತು ನಾಸಿಕ್ ರಸ್ತೆಯ ಕೆಲಸವನ್ನು ಮಾಡಬೇಕು.
4. ಭಕ್ತರಿಗೆ ಸಂವಹನದಲ್ಲಿ ಯಾವುದೇ ತೊಂದರೆಯಾಗಬಾರದು; ಆದ್ದರಿಂದ ಮೊಬೈಲ್ ನೆಟ್ವರ್ಕ್ ವ್ಯವಸ್ಥೆಯು ಬಲವಾಗಿರಬೇಕು. ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು.
5. ತ್ರ್ಯಂಬಕೇಶ್ವರದ ಕುಶಾವರ್ತ ಮತ್ತು ನಾಸಿಕ್ನ ಗೋದಾವರಿ ನದಿಯ ನೀರು ಕುಂಭಮೇಳದ ಸಮಯದಲ್ಲಿ ಶುದ್ಧವಾಗಿರಲು ಸಂಬಂಧಪಟ್ಟ ಇಲಾಖೆಗಳು ವಿಶೇಷ ಕಾಳಜಿ ವಹಿಸಬೇಕು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !