ಕಾಶ್ಮೀರದಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹತ

೧ ಸೈನಿಕ ವೀರಮರಣ

ಉರಿ (ಜಮ್ಮು-ಕಾಶ್ಮೀರ) – ಉರಿ ಸೆಕ್ಟರ್‌ನಲ್ಲಿ ನಡೆದ ಸೈನಿಕ ಕಾರ್ಯಾಚರಣೆಯ ಸಮಯದಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಪೂಂಚ್‌ನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಒಬ್ಬ ಸೈನಿಕ ವೀರಮರಣವನ್ನಪ್ಪಿದರು. ಅವರ ಹೆಸರು ಸುಬೇದಾರ್ ಸಂದೀಪ್ ಕುಮಾರ್ ಢಾಕಾ ಎಂದಾಗಿದೆ. ಸುಬೇದಾರ್ ಢಾಕಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದರು. ಇದರಿಂದ ಅವರು ಪ್ರಜ್ಞೆ ತಪ್ಪಿದ ನಂತರ ಅವರನ್ನು ತಕ್ಷಣವೇ ಸೈನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾಗ ಅವರು ಮೃತಪಟ್ಟರು.

ಸಂಪಾದಕೀಯ ನಿಲವು

ಭಾರತದಲ್ಲಿ ಪಾಕಿಸ್ತಾನವು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ‘ಆಪರೇಷನ್ ಸಿಂದೂರ್ – ೨’ ಮಾಡುವುದು ಅವಶ್ಯಕವಾಗಿದೆ!