ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರತಿಭಟನೆಯ ವೇದಿಕೆಯಿಂದ ದಾವೆ ಮಾಡಲಾಗಿತ್ತು

ಕೋಲಕಾತಾ (ಬಂಗಾಳ) – ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನಾ ಅಭಿಯಾನದ ಮೂಲಕ ಚುನಾವಣಾ ಆಯೋಗವು ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ಕೈಬಿಡುತ್ತಿದೆ ಎಂದು ಆರೋಪಿಸಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲಕಾತಾದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಕಾವಿ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬನನ್ನು ಮಿನಾಖಾನ್ನ ‘ರಾಮಕೃಷ್ಣ ಶಾರದಾ ಮಿಷನ್’ನ ಸಾಧು ಎಂದು ವೇದಿಕೆಯ ಮೇಲೆ ಪರಿಚಯಿಸಲಾಯಿತು. ಈ ಸಾಧುವು, “ನಾನು ಮಿನಾಖಾನ್ ಶಾಖೆಯ ರಾಮಕೃಷ್ಣ ಶಾರದಾ ಮಿಷನ್ನ ಅಧ್ಯಕ್ಷನಾಗಿದ್ದು, ಕಳೆದ 14 ವರ್ಷಗಳಿಂದ ಸಂಘಟನೆಯ ಸೇವೆ ಮಾಡುತ್ತಿದ್ದೇನೆ” ಎಂದು ಹೇಳಿಕೊಂಡಿದ್ದನು. ಅಲ್ಲದೆ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆತ ಹೇಳಿಕೊಂಡಿದ್ದನು. “ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂಬ ಆಶಯದೊಂದಿಗೆ ನಾನು ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಬಂದಿದ್ದೇನೆ” ಎಂದು ಆತ ತಿಳಿಸಿದ್ದನು.

ಈ ಘಟನೆ ನಡೆದ ಒಂದು ವಾರದ ನಂತರ, ರಾಮಕೃಷ್ಣ ಶಾರದಾ ಮಿಷನ್ ಸಂಸ್ಥೆಯು ಮಿನಾಖಾನ್ನಲ್ಲಿ ತಮಗೆ ಯಾವುದೇ ಶಾಖೆ ಇಲ್ಲ ಮತ್ತು ಸಂಘಟನೆಯಲ್ಲಿ ಅಂತಹ ಯಾವುದೇ ಸಾಧು ಇಲ್ಲ ಎಂದು ಸ್ಪಷ್ಟಪಡಿಸಿದೆ. ಮಾರ್ಚ್ 15 ರಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರವ್ರಾಜಿಕಾ ಅತಾಂದ್ರಪ್ರಾಣ ಅವರು ಪತ್ರಿಕೆಗಳಲ್ಲಿ ಪ್ರಕಟಿಸಿದ ಸಾರ್ವಜನಿಕ ಪ್ರಕಟಣೆಯಲ್ಲಿ, “ಯಾವುದೇ ಸಾಧು ಆ ಶಾಖೆಯ ಅಧ್ಯಕ್ಷ ಎಂದು ಹೇಳಿಕೊಳ್ಳುತ್ತಿರುವುದು ಸಂಪೂರ್ಣ ಆಧಾರರಹಿತ ಮತ್ತು ದಾರಿ ತಪ್ಪಿಸುವಂತಿದೆ. ಇಂತಹ ಬಹಿರಂಗ ಹಕ್ಕುಗಳು ಮತ್ತು ಹೇಳಿಕೆಗಳಿಂದ ನಾವು ಸಂಪೂರ್ಣವಾಗಿ ದೂರವಿದ್ದೇವೆ” ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಇಂತಹ ನಕಲಿ ವ್ಯಕ್ತಿಗಳನ್ನು ಜೀವಾವಧಿ ಶಿಕ್ಷೆ ವಿಧಿಸಬೇಕು, ಆಗಲೇ ಇತರರಿಗೆ ಭಯ ಹುಟ್ಟುತ್ತದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!