ಕ್ರಮ ಕೈಗೊಳ್ಳುವ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸಲು ಕೇಂದ್ರ ಸರಕಾರಕ್ಕೆ ವಿನಂತಿ!

ಮುಂಬಯಿ, ಮಾರ್ಚ್ 17 – ಮಾದಕ ವಸ್ತುಗಳ ಕಳ್ಳಸಾಗಾಣಿಕೆಯಲ್ಲಿ ಅಪ್ರಾಪ್ತ ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಬಳಸಲಾಗುತ್ತಿದೆ. ಈ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ಇರುವ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರಕಾರಕ್ಕೆ ವಿನಂತಿ ಮಾಡಲಾಗುವುದೆಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಾರ್ಚ್ 17 ರಂದು ವಿಧಾನಸಭೆಯಲ್ಲಿ ತಿಳಿಸಿದರು. ನಾಗಪುರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಕಳ್ಳಸಾಗಾಣಿಕೆ ಬಗ್ಗೆ ಬಿಜೆಪಿ ಶಾಸಕ ಪ್ರವೀಣ್ ದಟ್ಕೆ ಅವರು ಕೇಳಿದ ಪ್ರಶ್ನೆಗೆ ದೇವೇಂದ್ರ ಫಡ್ನವೀಸ್ ಉತ್ತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫಡ್ನವೀಸ್ ಅವರು, “2025-26 ನೇ ಸಾಲಿನಲ್ಲಿ ಮಾದಕ ವಸ್ತು ಕಳ್ಳಸಾಗಾಣಿಕೆಯ 10 ಪ್ರಕರಣಗಳಲ್ಲಿ ‘ಮಕೋಕಾ’ (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. “ನಾಗಪುರದಲ್ಲಿ ಕಳೆದ 11 ತಿಂಗಳುಗಳಲ್ಲಿ ‘ಆಪರೇಷನ್ ಥಂಡರ್'(ಆಪರೇಷನ್ ಥಂಡರ್ ಎಂದರೆ ಅಪರಾಧಿಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸು ಕಾರ್ಯಾಚರಣೆ) ಅಡಿಯಲ್ಲಿ 907 ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಅದರಲ್ಲಿ 10 ಕೋಟಿ ರೂಪಾಯಿ ಮೌಲ್ಯದ 1,254 ಕಿಲೋ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ, “ಪ್ರಸ್ತುತ ಸಣ್ಣ-ಪುಟ್ಟ ಪ್ರದೇಶಗಳಲ್ಲೂ ಮಾದಕ ವಸ್ತು ತಯಾರಿಸುವ ಜಾಲಗಳು ನಡೆಯುತ್ತಿವೆ. ಇವುಗಳ ನಂಟು ಬೇರೆ ರಾಜ್ಯಗಳಿಗೂ ಹರಡಿದ್ದು, ಅಲ್ಲಿಯೂ ಹೋಗಿ ನಾವು ಕಾರ್ಯಾಚರಣೆ ನಡೆಸಿದ್ದೇವೆ. ಮಾದಕ ವಸ್ತು ಕಳ್ಳಸಾಗಾಣಿಕೆಯಲ್ಲಿ ಪೊಲೀಸರ ನೇರ ಭಾಗವಹಿಸುವಿಕೆ ಕಂಡುಬಂದಲ್ಲಿ, ಅವರನ್ನು ಸೇವೆಯಿಂದ ಕಾಯಂ ಆಗಿ ವಜಾಗೊಳಿಸಲಾಗುವುದು,” ಎಂದು ಫಡ್ನವೀಸ್ ಅವರು ಹೇಳಿದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ