ಕ್ರಮ ಕೈಗೊಳ್ಳುವ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸಲು ಕೇಂದ್ರ ಸರಕಾರಕ್ಕೆ ವಿನಂತಿ!

ಮುಂಬಯಿ, ಮಾರ್ಚ್ 17 – ಮಾದಕ ವಸ್ತುಗಳ ಕಳ್ಳಸಾಗಾಣಿಕೆಯಲ್ಲಿ ಅಪ್ರಾಪ್ತ ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಬಳಸಲಾಗುತ್ತಿದೆ. ಈ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ಇರುವ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರಕಾರಕ್ಕೆ ವಿನಂತಿ ಮಾಡಲಾಗುವುದೆಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಾರ್ಚ್ 17 ರಂದು ವಿಧಾನಸಭೆಯಲ್ಲಿ ತಿಳಿಸಿದರು. ನಾಗಪುರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಕಳ್ಳಸಾಗಾಣಿಕೆ ಬಗ್ಗೆ ಬಿಜೆಪಿ ಶಾಸಕ ಪ್ರವೀಣ್ ದಟ್ಕೆ ಅವರು ಕೇಳಿದ ಪ್ರಶ್ನೆಗೆ ದೇವೇಂದ್ರ ಫಡ್ನವೀಸ್ ಉತ್ತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫಡ್ನವೀಸ್ ಅವರು, “2025-26 ನೇ ಸಾಲಿನಲ್ಲಿ ಮಾದಕ ವಸ್ತು ಕಳ್ಳಸಾಗಾಣಿಕೆಯ 10 ಪ್ರಕರಣಗಳಲ್ಲಿ ‘ಮಕೋಕಾ’ (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. “ನಾಗಪುರದಲ್ಲಿ ಕಳೆದ 11 ತಿಂಗಳುಗಳಲ್ಲಿ ‘ಆಪರೇಷನ್ ಥಂಡರ್'(ಆಪರೇಷನ್ ಥಂಡರ್ ಎಂದರೆ ಅಪರಾಧಿಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸು ಕಾರ್ಯಾಚರಣೆ) ಅಡಿಯಲ್ಲಿ 907 ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಅದರಲ್ಲಿ 10 ಕೋಟಿ ರೂಪಾಯಿ ಮೌಲ್ಯದ 1,254 ಕಿಲೋ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ, “ಪ್ರಸ್ತುತ ಸಣ್ಣ-ಪುಟ್ಟ ಪ್ರದೇಶಗಳಲ್ಲೂ ಮಾದಕ ವಸ್ತು ತಯಾರಿಸುವ ಜಾಲಗಳು ನಡೆಯುತ್ತಿವೆ. ಇವುಗಳ ನಂಟು ಬೇರೆ ರಾಜ್ಯಗಳಿಗೂ ಹರಡಿದ್ದು, ಅಲ್ಲಿಯೂ ಹೋಗಿ ನಾವು ಕಾರ್ಯಾಚರಣೆ ನಡೆಸಿದ್ದೇವೆ. ಮಾದಕ ವಸ್ತು ಕಳ್ಳಸಾಗಾಣಿಕೆಯಲ್ಲಿ ಪೊಲೀಸರ ನೇರ ಭಾಗವಹಿಸುವಿಕೆ ಕಂಡುಬಂದಲ್ಲಿ, ಅವರನ್ನು ಸೇವೆಯಿಂದ ಕಾಯಂ ಆಗಿ ವಜಾಗೊಳಿಸಲಾಗುವುದು,” ಎಂದು ಫಡ್ನವೀಸ್ ಅವರು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ